Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

Bengaluru City

ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

Public TV
Last updated: July 29, 2025 7:25 am
Public TV
Share
5 Min Read
Naga Panchami
SHARE

ಶ್ರಾವಣ ಮಾಸದ ಶುಕ್ಲಪಕ್ಷದ 5ನೇ ಇಡೀ ಭಾರತದಾದ್ಯಂತ ನಾನಾ ಕಡೆ ನಾನಾ ರೀತಿಯಲ್ಲಿ ನಾಗರ ಪಂಚಮಿಯ (Naga Panchami) ಮನೆ ಮಾಡಿರುತ್ತದೆ. ಈ ದಿನ ಮನೆಮಂದಿ ಮುಂಜಾನೆ ನಾಗನ ಗುಡಿಗೆ ಹೋಗಿ ನಾಗದೇವತೆಗೆ ಪೂಜೆ ಸಲ್ಲಿಸುತ್ತಾರೆ, ನಾಗದೇವರ ಕಲ್ಲಿಗೆ ಹಾಲೆರೆಯುತ್ತಾರೆ. ನಾಗಪೂಜೆಯ ದಿನ ಅನಂತ, ವಾಸುಕಿ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಎಂಬ ಒಂಬತ್ತು ನಾಗದೇವತೆಗಳನ್ನು ಆರಾಧಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಆಚರಣೆ ಸಂಭ್ರಮದಿಂದಲೇ ಕೂಡಿರುತ್ತದೆ. ಬೆಳ್ಳಂ ಬೆಳಗ್ಗೆ ಜನ ಹುತ್ತಕ್ಕೆ ತನಿ ಎರೆಯುವ ಮೂಲಕ ಆಚರಣೆ ಮಾಡುತ್ತಾರೆ.

ಹೌದು. ಭಾರತೀಯ ಪುರಾಣಗಳಲ್ಲಿ ನಾಗಗಳಿಗೆ ದೈವಿಕ ಸ್ಥಾನ ಇದೆ. ಬ್ರಹ್ಮನ ಮಗ ಕಶ್ಯಪ ದಕ್ಷ ಪ್ರಜಾಪತಿಯ ಹದಿನಾರು ಹೆಣ್ಣು ಮಕ್ಕಳನ್ನು ಮದುವೆಯಾಗಿದ್ದ. ಇವರಲ್ಲಿ ಅದಿತಿಯ ಮಕ್ಕಳು ದೇವತೆಗಳು, ದಿತಿಯ ಮಕ್ಕಳು ದೈತ್ಯರು ಮತ್ತು ಕದ್ರುವಿಗೆ ಜನಿಸಿದ್ದ ಸಾವಿರ ಮಕ್ಕಳು ನಾಗಗಳು. ಹೀಗಾಗಿ ನಾಗಗಳು ದೇವತೆಗಳ ಸಂಬಂಧಿಗಳಾಗಿದ್ದಾರೆ ಎಂದು ಜನರ ನಂಬಿಕೆ. ಪುರಾಣಗಳ ಪ್ರಕಾರ, ನಾಗಕುಲದವರು ಪಾತಾಳ ಲೋಕವನ್ನು ಆಳುತ್ತಿದ್ದರು. ಶೇಷ, ತಕ್ಷಕ, ವಾಸುಕಿ, ಅನಂತ, ಪದ್ಮ, ಕಂಬಲ, ಕಾರ್ಕೋಟ, ಅಶ್ವತ್ಥ, ಧೃತರಾಷ್ಟ್ರ, ಶಂಖಪಾಲ, ಕಾಲಿಯಾ, ಪಿಂಗಳ ಎಂಬ 12 ನಾಗಗಳ ಉಲ್ಲೇಖ ಪುರಾಣಗಳಲ್ಲಿ ಬರುತ್ತದೆ. ಮಹಾಭಾರತದ ಪ್ರಕಾರ ರಾಜ ಪರೀಕ್ಷಿತನನ್ನು ನಾಗರಾಜ ತಕ್ಷಕ ಕಚ್ಚಿ ಕೊಂದಿದ್ದ. ಇದಕ್ಕೆ ಪ್ರತಿಕಾರವಾಗಿ ಪರೀಕ್ಷಿತನ ಮಗ ಜನಮೇಜಯ ಸರ್ಪಗಳ ಸಂತಾನವನ್ನೇ ನಿರ್ಮೂಲ ಮಾಡಲು ಮಹಾ ಸರ್ಪಯಜ್ಞವನ್ನೇ ನಡೆಸಿದ್ದ. ನಾಗಕುಲವೇ ನಾಶವಾಗುತ್ತದೆ ಎನ್ನುವಾಗ ಆಸ್ತಿಕ ಎಂಬ ಋಷಿ ಯಾಗಶಾಲೆಗೆ ಬಂದು ಈ ಯಜ್ಞವನ್ನು ತಡೆದಿದ್ದ. ಆಸ್ತಿಕ ನಾಗಯಜ್ಞ ನಿಲ್ಲಿಸಿದ ದಿನವನ್ನೇ ನಾಗರ ಪಂಚಮಿಯಾಗಿ ಆಚರಿಸಲಾಗುತ್ತದೆ ಎಂದು ಪ್ರತೀತಿ.

ಅದಕ್ಕಾಗಿಯೇ ಈ ದಿನ ಭಾರತದಂತಹ ದೇಶದಲ್ಲಿ ಹಳ್ಳಿ ಹಳ್ಳಿಗಳಲ್ಲೂ ನಾಗರ ಕಲ್ಲುಗಳು, ನಾಗದೇವರ ಗುಡಿಗಳು, ಶಿವ ಮತ್ತು ವಿಷ್ಣುವಿನ ದೇವಾಲಗಳಲ್ಲೂ ನಾಗದೇವರಿಗಾಗಿ ಗುಡಿಗಳು ಕಾಣುತ್ತೇವೆ. ಅಲ್ಲದೇ ಕೆಲ ದೇವಾಲಯಗಳಲ್ಲಿ ಕಾಲಸರ್ಪ ಬಾಧೆ, ಸರ್ಪದೋಷ ಪರಿಹಾರಕ್ಕಾಗಿ ಪೂಜಾ ವಿಧಿವಿಧಾನಗಳನ್ನೂ ನೆರವೇರಿಸಲಾಗುತ್ತದೆ. ಕರ್ನಾಟಕದಲ್ಲಿ ನಾಗದೈವಾರಾಧನೆ ಹೆಚ್ಚಾಗಿಯೇ ಇದೆ. ಕರ್ನಾಟಕದಲ್ಲಿ ಅನೇಕ ನಾಗ ದೇವಾಲಯಗಳಿವೆ, ಆದರೆ ಕುಕ್ಕೆ ಸುಬ್ರಹ್ಮಣ್ಯ ಮತ್ತು ಮುಕ್ತಿನಾಗ ಕ್ಷೇತ್ರಗಳು ಪ್ರಮುಖವಾಗಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪ ದೋಷ ನಿವಾರಣೆಗೆ ಹೆಸರುವಾಸಿಯಾಗಿದೆ ಮತ್ತು ಮುಕ್ತಿನಾಗ ಕ್ಷೇತ್ರವು ನಾಗದೋಷ ಪರಿಹಾರಕ್ಕಾಗಿ ಪ್ರಸಿದ್ಧವಾಗಿದೆ. ಕರ್ನಾಟಕ ಹೊರತುಪಡಿಸಿಯೂ ದೇಶದ ವಿವಿಧ ಭಾಗಗಳಲ್ಲಿ ಜನರಿಂದ ಅಗಾಧ ನಂಬಿಕೆ ಗಳಿಸಿರುವ ದೇವಾಲಯಗಳು ಇವೆ. ಮೊದಲಿಗೆ ಕರ್ನಾಟಕದ ಪವರ್‌ಫುಲ್‌ ನಾಗ ದೇವಾಲಯಗಳ ಬಗ್ಗೆ ತಿಳಿಯೋಣ. ಅವುಗಳ ವಿಶೇಷತೆ ಏನೆಂದು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

nagara panchami 9

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಈ ದೇವಾಲಯವು ಕುಮಾರ ಪರ್ವತದ ತಪ್ಪಲಿನಲ್ಲಿ, ಕುಮಾರಧಾರಾ ನದಿಯ ದಡದಲ್ಲಿದೆ. ಇಲ್ಲಿ ವಾಸುಕಿ ಮತ್ತು ಶೇಷನಾಗನನ್ನು ಪೂಜಿಸಲಾಗುತ್ತದೆ. ಸರ್ಪ ದೋಷ ನಿವಾರಣೆಗೆ ಈ ದೇವಸ್ಥಾನಕ್ಕೆ ಭೇಟಿ ನೀಡುವುದು ಬಹಳ ಮುಖ್ಯ ಎಂದು ನಂಬಲಾಗಿದೆ.

ಮುಕ್ತಿನಾಗ ಕ್ಷೇತ್ರ:
ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿದೆ. ಈ ಕ್ಷೇತ್ರವನ್ನು ನವಸುಬ್ರಹ್ಮಣ್ಯ ದೇವಸ್ಥಾನವೆಂದೂ ಕರೆಯುತ್ತಾರೆ. ಇಲ್ಲಿ 16 ಅಡಿ ಎತ್ತರದ ಏಳು ಹೆಡೆಯ ನಾಗಮೂರ್ತಿಯನ್ನು ಕಾಣಬಹುದು. ನಾಗದೋಷ ಪರಿಹಾರಕ್ಕಾಗಿ ಈ ಕ್ಷೇತ್ರಕ್ಕೆ ಭಕ್ತರು ಭೇಟಿ ನೀಡುತ್ತಾರೆ. ಮುಕ್ತಿ ಎಂಬ ಹೆಸರೇ ಸೂಚಿಸುವಂತೆ, ಇಲ್ಲಿ ನಾಗದೋಷಗಳಿಗೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ.

Nagara Panchami 7

ಇತರ ನಾಗ ದೇವಾಲಯಗಳು:
ಘಾಟಿ ಸುಬ್ರಹ್ಮಣ್ಯ ಮತ್ತು ನಾಗಲಮಡಿಕೆ ಕೂಡ ಕರ್ನಾಟಕದ ಪ್ರಮುಖ ನಾಗ ದೇವಾಲಯಗಳಾಗಿವೆ. ಈ ಮೂರು ದೇವಾಲಯಗಳು ರಾಜ್ಯದಲ್ಲಿ ತ್ರಿಕೋನವನ್ನು ಸೃಷ್ಟಿಸುತ್ತವೆ. ವಿವಿಧ ಪ್ರದೇಶಗಳ ಭಕ್ತರು ಈ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ವಿದುರಾಶ್ವಥದಲ್ಲಿ ನಾಗಾರಾಧನೆಯು ಪ್ರಚಲಿತದಲ್ಲಿದೆ, ಇದು ಕೂಡ ನಾಗದೇವತೆಗೆ ಸಂಬಂಧಿಸಿದ ಸ್ಥಳವಾಗಿದೆ.

ಕಾಶ್ಮೀರದ ಶೇಷನಾಗ ದೇವಾಲಯ
ಕಾಶ್ಮೀರದಲ್ಲಿ ಹಿಂದಿನ ಕಾಲದಲ್ಲಿ 700ಕ್ಕೂ ಹೆಚ್ಚು ನಾಗಾರಾಧನೆಯ ಕೇಂದ್ರಗಳಿದ್ದವು. ಇಂದಿಗೂ ಸಹ ಇಲ್ಲಿನ ಮನ್ಸಾರ್ ಸರೋವರದ ಪರಿಸರದಲ್ಲಿ ಶೇಷನಾಗಿಗಳು ಎಂಬ ಅಲೆಮಾರಿ ಜನರಿದ್ದಾರೆ. ಇವರು ನಾಗಪೂಜಕರು, ಮನ್ಸಾರ್ ಸರೋವರದ ಪೂರ್ವ ತೀರದ ಸಮೀಪದಲ್ಲಿ ಒಂದು ಸುಪ್ರಸಿದ್ಧ ಶೇಷನಾಗ ದೇವಾಲಯ (Sheshnag Temple) ಇದೆ. ಈ ದೇವಾಲಯ 5 ಶತಮಾನಗಳಷ್ಟು ಪುರಾತನ ಎಂದು ಇಲ್ಲಿನ ಜನ ಹೇಳುತ್ತಾರೆ.

Sheshnag Temple

ಈ ದೇವಾಲಯ ನೆಲದಿಂದ ಸುಮಾರು 200 ಅಡಿ ಎತ್ತರದಲ್ಲಿದೆ. ಈ ದೇವಾಲಯದಲ್ಲಿ 6 ತಲೆಗಳ ಶೇಷನಾಗನ ವಿಗ್ರಹ ಇದೆ. ಇವನ ಸುತ್ತ ಹಲವಾರು ಚಿಕ್ಕ ನಾಗಗಳಿವೆ. ವಧು-ವರರು ಇಲ್ಲಿ ಪೂಜೆ ಸಲ್ಲಿಸಿದರೇ ಅವರಿಗೆ ನಾಗರಾಜನ ಆಶೀರ್ವಾದ ಸಿಗುತ್ತದೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂದು ಇಲ್ಲಿನವರ ನಂಬಿಕೆ. ಹೀಗಾಗಿ ಕಾಶ್ಮೀರದ ದೂರ ದೂರದ ಭಾಗಗಳಿಂದ ನವವಿವಾಹಿತರು ಶೇಷನಾಗನ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ.

ಈ ಸ್ಥಳದ ಇತಿಹಾಸದ ಪ್ರಕಾರ ಮನ್ಸಾರ್ ಸರೋವರವನ್ನು ನಾಗದೇವ ಶೇಷನಾಗ ಸ್ವತಃ ನಿರ್ಮಿಸಿದ್ದ. ವಿಶಾಲ ಮನ್ಸಾರ್ ಕೆರೆಯ ನಡುವೆ ಹಲವಾರು ದ್ವೀಪಗಳಿವೆ. ಇವುಗಳಲ್ಲಿ ಶೇಷನಾಗ ದ್ವೀಪವೂ ಒಂದಾಗಿದೆ. ಪ್ರವಾಸಿಗಳು ಇಲ್ಲಿಗೆ ದೋಣಿಗಳಲ್ಲಿ ಹೋಗಬಹುದು. ಈ ದ್ವೀಪದಲ್ಲಿ 14ನೇ ಶತಮಾನದ ಶೇಷನಾಗದೇವಿಯ ದೇವಾಲಯ ಇದೆ. ಜಮ್ಮು ವಿಮಾನ ನಿಲ್ದಾಣದಿಂದ ಮನ್ಸಾರ್ ಕೆರೆಗೆ 69 ಕಿಮೀ ದೂರವಿದ್ದು, ಉಧಮ್‌ಪುರದಿಂದ 25 ಕಿಮೀ ದೂರ. ಸಾಂಬಾ ಪಟ್ಟಣದಿಂದ ಇಲ್ಲಿಗೆ ನಡೆದುಕೊಂಡು ಹೋಗಬಹುದು.

Nagchandreshwar Mandir

ಉಜ್ಜಯಿನಿ ನಾಗಚಂದ್ರೇಶ್ವರ ದೇವಾಲಯ
ಉಜ್ಜಯಿನಿ ಬಾಬಾ ಮಹಾಕಾಲೇಶ್ವರನ ಪವಿತ್ರ ಸ್ಥಾನ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಪ್ರಧಾನಕ್ಷೇತ್ರ ಇದು. ಇಲ್ಲಿರುವ ಮಹಾಕಾಲ ಶಿವಲಿಂಗವನ್ನು ಸ್ವಯಂಭು ಎಂದು ಕರೆಯಲಾಗುತ್ತದೆ. ಉಜ್ಜಯಿನಿಯ ಭವ್ಯ ಮಹಾಕಾಲೇಶ್ವರ ದೇವಾಲಯವನ್ನು ಪರ್ಮಾರ್ ಮನೆತನದ ರಾಜಾ ಭೋಜ 1050ರ ಸುಮಾರಿಗೆ ನಿರ್ಮಿಸಿದ್ದ. ಈ ದೇವಾಲಯದಲ್ಲಿ ಐದು ಅಂತಸ್ತುಗಳಿವೆ. ಎಲ್ಲಕ್ಕಿಂತ ಕೆಳಗೆ ನೆಲಮಾಳಿಗೆ. ಅದರ ಮೇಲಿನ ಅಂತಸ್ತಿನಲ್ಲಿ ಮಹಾಕಾಲೇಶ್ವರ ಲಿಂಗ. ಮಧ್ಯದ ಅಂತಸ್ತಿನಲ್ಲಿರುವುದು ಓಂಕಾರೇಶ್ವರ. 3ನೇ ಮಾಳಿಗೆಯಲ್ಲಿ ನಾಗಚಂದ್ರೇಶ್ವರ (Nagchandreshwar Mandir) ಲಿಂಗವಿದೆ. ಇಲ್ಲಿ 10 ತಲೆಯ ನಾಗನ ಮೇಲೆ ಕುಳಿತಿರುವ ಶಿವನ ವಿಗ್ರಹ ಇದೆ.

ನಾಗನ ಮೇಲೆ ವಿಷ್ಣುವಿನ ಬದಲು ಶಿವನನ್ನು ತೋರಿಸುವ ಏಕಮಾತ್ರ ದೇವಾಲಯ ಇದು. ಈ ಏಕಶಿಲಾ ಮೂರ್ತಿಯಲ್ಲಿ ಶಿವ, ಪಾರ್ವತಿ ಗಣೇಶ, ಭೈರವ ಮತ್ತು ನಂದಿಯನ್ನೂ ಕಾಣಬಹುದು. ಈ ವಿಗ್ರಹವನ್ನು ಶತಮಾನಗಳ ಹಿಂದೆ ನೇಪಾಳದಿಂದ ತರಲಾಗಿತ್ತು ಎನ್ನುತ್ತದೆ ಪುರಾಣ. ದೇವಾಲಯದ ಬಾಗಿಲನ್ನು ವರ್ಷಕ್ಕೆ ಒಮ್ಮೆ ನಾಗರ ಪಂಚಮಿಯ ದಿನ ಮಾತ್ರ ತೆರೆಯಲಾಗುತ್ತದೆ. ಆ ದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ನಾಗಚಂದ್ರೇಶ್ವರ ದೇವಾಲಯದಲ್ಲಿ ಸರ್ಪಶಯನ ಶಿವನನ್ನು ಆರಾಧಿಸುವುದರಿಂದ ಎಲ್ಲ ಸರ್ಪದೋಷಗಳು ನಿವಾರಣೆಯಾಗುತ್ತವೆ ಎಂದು ಭಕ್ತರು ನಂಬಿದ್ದಾರೆ. ಈ ದಿನ ಸ್ವಯಂ ನಾಗರಾಜ ತಕ್ಷಕನೇ ಇಲ್ಲಿಗೆ ಬಂದು ಭಕ್ತರ ಪೂಜೆ ಸ್ವೀಕರಿಸುತ್ತಾನೆ, ನಮ್ಮನ್ನು ಆಶೀರ್ವಧಿಸುತ್ತಾನೆ ಎಂಬುದು ಸಹ ಭಕ್ತರ ನಂಬಿಕೆ.

Bhujang Naga Temple

ಗುಜರಾತ್‌ನ ಭುಜಂಗ ನಾಗ ದೇವಾಲಯ:
ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿರುವ ಭುಜ್ ಪಟ್ಟಣದ ಹೊರಗೆ ಭುಜಿಯಾ ಡುಂಗರ್ ಎಂಬ ಬೆಟ್ಟ ಇದೆ. ಈ ಬೆಟ್ಟದ ಮೇಲೆ ಒಂದು ಪ್ರಾಚೀನ ಕೋಟೆ ಇದೆ. ಸುಪ್ರಸಿದ್ದ ಭುಜಂಗ ನಾಗ ದೇವಾಲಯ (Bhujang Naga Temple) ಇರುವುದು ಇಲ್ಲಿಯೇ. ಪುರಾಣದ ಪ್ರಕಾರ ಹಿಂದೆ ಕಛ್‌ ಪ್ರಾಂತ್ಯವನ್ನು ದೈತ್ಯವಂಶದ ರಾಕ್ಷಸರು ಆಳುತ್ತಿದ್ದರು. ಕಾಠೇವಾಡದಿಂದ ಬಂದಿದ್ದ ಭುಜಂಗ ನಾಗ ಎಂಬ ರಾಜ ಜನರನ್ನು ರಾಕ್ಷಸರ ಆಳ್ವಿಕೆಯಿಂದ ಬಿಡುಗಡೆ ಮಾಡಿ ತನ್ನ ರಾಜ್ಯ ಸ್ಥಾಪಿಸಿದ್ದ.

Nagamandala

ಭುಜಂಗನನ್ನು ಜನರು ನಾಗರಾಜ ಎಂದು ಪೂಜಿಸಲು ಆರಂಭಿಸಿದರು. ಈತನನ್ನು ಶೇಷನಾಗನ ಸಹೋದರ ಎಂದು ನಂಬಲಾಯಿತು. ಅವನ ಪೂಜೆಗಾಗಿ ಭುಜಂಗ ದೇವಾಲಯವನ್ನು ನಿರ್ಮಿಸಲಾಗಿತ್ತು. 1715ರಲ್ಲಿ ಜಡೇಜಾ ಮನೆತನದ ರಾಜರು ಇಲ್ಲಿ ಭುಜಿಯಾ ಕೋಟೆಯನ್ನು ನಿರ್ಮಿಸಿದ್ದರು. ಈ ಕೋಟೆಯ ನಡುವೆ ಭುಜಂಗ ನಾಗ ದೇವಾಲಯ ಇದೆ. ನಾಗಾ ಸಾಧುಗಳು ಈ ದೇವಾಲಯದಲ್ಲಿ ನಾಗದೇವತೆಯನ್ನು ಆರಾಧಿಸುತ್ತಿದ್ದರು. ದೇಶಾಲ್ಜೀ ಎಂಬ ರಾಜ 1723ರಲ್ಲಿ ಈ ದೇವಾಲಯದ ಮೇಲೆ ಮಂಟಪ ನಿರ್ಮಿಸಿದ್ದ. ಅಂದಿನಿಂದ ಇಲ್ಲಿ ಶ್ರಾವಣ ಮಾಸದಲ್ಲಿ ನಾಗರಪಂಚಮಿಯ ಉತ್ಸವ ಸಂಭ್ರಮದಿಂದ ಆಚರಿಸಲಾಗುತ್ತದೆ.

TAGGED:Naga PanchamiNaga TempleNagar PanchamiNagar Panchami Celebrationನಾಗ ಪಂಚಮಿನಾಗದೇವತೆನಾಗರ ಪಂಚಮಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

apples Goods vehicle overturns belagavi national highway 1
Belgaum

ಗೂಡ್ಸ್ ವಾಹನ ಪಲ್ಟಿ- ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

Public TV
By Public TV
35 minutes ago
trump crude oil
Latest

ಟ್ರಂಪ್‌ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆ

Public TV
By Public TV
1 hour ago
Chitradurga BAMS Student Suicide
Chitradurga

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
2 hours ago
APSRTC Bus Accident Bengaluru
Bengaluru City

ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

Public TV
By Public TV
2 hours ago
Donald Trump
Latest

ಮಧ್ಯಪ್ರಾಚ್ಯ ದೇಶಗಳ ರಕ್ಷಣೆಗೆ ಯುದ್ಧ ಅನಿವಾರ್ಯ – ಈ ಪರಿಸ್ಥಿತಿಗೆ ಒಬಾಮಾ ನೀತಿಯೇ ಕಾರಣ: ಟ್ರಂಪ್‌ ಕಿಡಿ

Public TV
By Public TV
2 hours ago
Bengaluru Karaga
Bengaluru City

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ – ಕಣ್ತುಂಬಿಕೊಂಡ ಭಕ್ತಗಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?