Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಕಾಫಿನಾಡ ದತ್ತಪೀಠದ ಇತಿಹಾಸ ಏನು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಕಾಫಿನಾಡ ದತ್ತಪೀಠದ ಇತಿಹಾಸ ಏನು ಗೊತ್ತಾ?

Chikkamagaluru

ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಕಾಫಿನಾಡ ದತ್ತಪೀಠದ ಇತಿಹಾಸ ಏನು ಗೊತ್ತಾ?

Public TV
Last updated: December 12, 2023 11:06 pm
Public TV
Share
5 Min Read
01 4
SHARE

ಕರ್ನಾಟಕದ ಅಯೋಧ್ಯೆ (Ayodhya Of Karnataka) ಎಂದೇ ಖ್ಯಾತಿಯಾಗಿರುವ ವಿವಾದಿತ ಧಾರ್ಮಿಕ ಕ್ಷೇತ್ರ ದತ್ತಪೀಠ. ಹಿಂದೂಗಳು ಇದನ್ನ ಇನಾಂ ದತ್ತಾತ್ರೇಯ ಪೀಠ ಎಂದು ಕರೆದರೆ, ಮುಸ್ಲಿಮರು ಬಾಬಾಬುಡನ್ ಗಿರಿ ದರ್ಗಾ ಎಂದು ನಂಬಿದ್ದಾರೆ. ಆದರೆ ಕಳೆದ ನಾಲ್ಕು ದಶಕಗಳಿಂದ ಇದರ ಉಮೇದುವಾರಿಕೆಗಾಗಿ ಹಿಂದೂ-ಮುಸ್ಲಿಮರು ಹೋರಾಡುತ್ತಿದ್ದಾರೆ. ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿರುವುದರಿಂದ ಸರ್ಕಾರ ಇದನ್ನ ʼಇನಾಂ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾʼ ಎಂದು ಕರೆಯುತ್ತಿದೆ. ವರ್ಷಪೂರ್ತಿ ಎರಡು ಕೋಮಿನ ಭಕ್ತರು ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ಹಿಂದೂ ಸಂಘಟನೆಗಳು ದತ್ತಪೀಠದಲ್ಲಿ ದತ್ತಜಯಂತಿ ಆಚರಿಸಿದರೆ, ಮುಸ್ಲಿಮರು ಉರುಸ್ ಆಚರಿಸುತ್ತಾರೆ. ಈ ಎರಡೂ ಕಾರ್ಯಕ್ರಮ ಕೂಡ ಸರ್ಕಾರದ ನೆರಳಿನಲ್ಲೇ ನಡೆಯುತ್ತಿದೆ. ಆದರೆ ಈ ಪುಣ್ಯಕ್ಷೇತ್ರ ನಮ್ಮದು ಎಂದು ಎರಡು ಸಮುದಾಯದ ಜನ ಇಂದಿಗೂ ಹೋರಾಡೋದು ಮಾತ್ರ ನಿಂತಿಲ್ಲ, ನಿಲ್ಲೋದು ಇಲ್ಲ.

DATTAPEETA 3

ಪಶ್ಚಿಮಘಟ್ಟ (Western Ghat) ಅಂದ್ರೆನೆ ಭೂಲೋಕದ ಸ್ವರ್ಗ. ಮುಗಿಲೆತ್ತರದ ಬೆಟ್ಟಗುಡ್ಡಗಳು. ಕಣ್ಣಿನ ದೃಷ್ಠಿಗೂ ಮುಗಿಯದ ನಿಸರ್ಗ ಮಾತೆಯ ಸೌಂದರ್ಯ. ತಣ್ಣನೆಯ ಗಾಳಿ, ಮೈಕೊರೆವ ಚಳಿ. ವರ್ಷದ 365 ದಿನವೂ ತುಂಬು ಮುತ್ತೈದೆಯಂತಿರೋ ಇಲ್ಲಿನ ಪ್ರಕೃತಿ ದೇವಿ ಸೌಂದರ್ಯ ಮುಂದೆ ಜಗತ್ತಿನ ಎಲ್ಲಾ ಸೌಂದರ್ಯವೂ ನಶ್ವರ. ಇದರ ಅಂದ ಬರೆಯೋಕೆ ಪುಟಗಳು ಸಾಲದು, ವರ್ಣಿಸೋಕೆ ಪದಪುಂಜವೇ ಸಾಲದು. ಇಲ್ಲಿನ ಅಂತಹಾ ವನದೇವಿಯ ಮಧ್ಯೆ ನೆಲೆನಿಂತಿರೋದು ದತ್ತಾತ್ರೇಯ ಸ್ವಾಮಿ. ಆ ಸುಂದರ ಪ್ರಕೃತಿಯ ಮಧ್ಯೆ ದತ್ತಾತ್ರೇಯರ ಪಾದುಕೆಗಳ ದರ್ಶನ ಪಡೆಯೋದೇ ಪುಣ್ಯ ಅನ್ನೋದು ಭಕ್ತರ ನಂಬಿಕೆ. ಹಾಗಾಗಿ ವರ್ಷಪೂರ್ತಿ ಇಲ್ಲಿಗೆ ಲಕ್ಷಾಂತರ ಹಿಂದೂಗಳು ಭೇಟಿ ನೀಡಿ ಪ್ರಕೃತಿಯ ಜೊತೆ ದತ್ತಾತ್ರೇಯ ಸ್ವಾಮಿ ದರ್ಶನ ಕೂಡ ಮಾಡುತ್ತಿದ್ದಾರೆ. ಈ ಪ್ರಕೃತಿಯ ತವರಿನಲ್ಲಿ ಗುರು ದತ್ತಾತ್ರೇಯ ಸ್ವಾಮಿ ಜೊತೆ, ಮಾತೆ ಅನುಸೂಯಾ ದೇವಿಯೂ ನೆಲೆಸಿದ್ದಾರೆ ಅನ್ನೋದು ದತ್ತಭಕ್ತರ ನಂಬಿಕೆ. ಈ ಮಣ್ಣು ಅತ್ರಿ ಮುನಿಗಳು ಬದುಕಿ-ಬಾಳಿದ್ದ ಪುಣ್ಯ ಭೂಮಿ. ಅತ್ರಿಮುನಿಗಳು ತಪಸ್ಸು ಮಾಡಿ, ಶಿಷ್ಯರಿಗೆ ಪಾಠ ಮಾಡಿದ, ಭಕ್ತರಿಗೆ ಅನುಗ್ರಹಿಸಿದ್ದ ತಪೋಭೂಮಿ. ಈ ಎಲ್ಲಾ ಅಂಶಗಳು ಕೂಡ ಶ್ರೀ ದತ್ತ ಭಾಗವತದಲ್ಲಿ ಉಲ್ಲೇಖವಿದೆ. ಇಂತಹ ಗುರು ಪರಂಪರೆಯ ತಪೋಭೂಮಿ ಕಳೆದ ನಾಲ್ಕೈದು ದಶಕಗಳಿಂದ ಹಿಂದೂ ಸಮಾಜದಿಂದ ದೂರವಾಗುವ ಹಂತಕ್ಕೆ ತಲುಪಿದೆ ಅನ್ನೋದು ಹಿಂದೂಗಳ ಆತಂಕ. ಇದನ್ನೂ ಓದಿ: ಕಾಫಿನಾಡಿನ ಸ್ವರ್ಗ ಮುಳ್ಳಯ್ಯನಗಿರಿ ನೀವೂ ಭೇಟಿ ಕೊಡಿ

DATTAPEETA FINAL

ದತ್ತಪೀಠಕ್ಕೆ (Dattapeeta) ತಲೆಮಾರುಗಳಿಂದ ನಡೆದುಕೊಳ್ಳುತ್ತಿರುವ ಭಕ್ತಗಣವಿದೆ. ಇತಿಹಾಸದಲ್ಲಿ ರಾಜ-ಮಹಾರಾಜರುಗಳು, ಮಠ-ಮಂದಿರಗಳು ಇಲ್ಲಿಗೆ ಭಕ್ತಿ ಸಮರ್ಪಣೆ ಮಾಡುತ್ತಿದ್ದರು. ಕೆಳದಿಯ ಚೆನ್ನಮ್ಮ ಇಲ್ಲಿ ಯಾತ್ರಿನಿವಾಸವನ್ನ ಕಟ್ಟಿಸಿದ್ದಳು. ಆನೆಗುಂದಿ ಅರಸರು ಇಪ್ಪತ್ತು ಗ್ರಾಮಗಳನ್ನ ದತ್ತಪೀಠಕ್ಕೆ ಕೊಡುಗೆ ನೀಡಿದ್ದರು. ಮೈಸೂರು ಅರಸರು ಪೀಠಕ್ಕೆ ಸಾವಿರಾರು ಎಕರೆ ಭೂಮಿಯನ್ನ ದಾನ ನೀಡಿದ್ದರು. ಅಷ್ಟೆ ಅಲ್ಲದೆ ದತ್ತಾತ್ರೇಯರಿಗೆ ನಿತ್ಯ ಪೂಜಾ-ಕೈಂಕರ್ಯಕ್ಕೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಸೌಲಭ್ಯ ಕಲ್ಪಿಸಿದ್ದರು. ಮೈಸೂರು ಅರಸರು ಸಾವಿರಾರು ಎಕರೆಯನ್ನ ಇನಾಂ ನೀಡಿದ ಪರಿಣಾಮ ಅಂದಿನಿಂದಲೂ ಈ ಧಾರ್ಮಿಕ ಕ್ಷೇತ್ರ ಇನಾಂ ದತ್ತಾತ್ರೇಯ ಪೀಠ ಎಂದೇ ಜನಜನಿತವಾಗಿದೆ.

18ನೇ ಶತಮಾನದ ಆಸು-ಪಾಸಿನಲ್ಲಿ ಸೂಫಿ ಪರಂಪರೆಯ ಹಜರತ್ ದಾದಾ ಹಯಾತ್ ಮೀರ್ ಖಲಂದರ್ ಇಲ್ಲಿಗೆ ಭೇಟಿ ನೀಡಿ, ಇಲ್ಲಿಯೇ ವಾಸ್ತವ್ಯ ಹೂಡಿದ್ದರು. ಅಂದಿನಿಂದ ಮುಸ್ಲಿಮರು ಇಲ್ಲಿಗೆ ಬರಲು ಆರಂಭಿಸಿದ್ದರು. ಮೈಸೂರು ಸಂಸ್ಥಾನವನ್ನ ವಶಪಡಿಸಿಕೊಂಡ ಹೈದರಾಲಿ ಶ್ರೀರಂಗಪಟ್ಟಣದ ಇಸ್ಮಾಯಿಲ್ ಶಾಖಾದ್ರಿ ಎಂಬ ಫಕೀರರನ್ನ ಕೆಲಸಕ್ಕೆಂದು ನೇಮಿಸಿತ್ತು. ಆದರೆ ಅವರಿಗೆ ಮಕ್ಕಳಿಲ್ಲದ ಕಾರಣ ಅವರು ಬುಡನ್ ಹಾಗೂ ಸೈಯ್ಯದ್ ಎಂಬ ಇಬ್ಬರು ಮಕ್ಕಳನ್ನ ದತ್ತು ಸ್ವೀಕಾರ ಮಾಡುತ್ತಾರೆ. ಮುಂದೆ ಆಡಳಿತಕ್ಕೆ ಬಂದ ಟಿಪ್ಪು ಇದೇ ಬುಡನ್ ನನ್ನ ದತ್ತಪೀಠದ ಆಡಳಿತಕ್ಕಾಗಿ ನೇಮಕ ಮಾಡುತ್ತಾನೆ. ದತ್ತಪೀಠಕ್ಕೆ ಬಂದ ಬುಡನ್ ಶಾಖಾದ್ರಿ ಓರ್ವ ವ್ಯವಸ್ಥಾಪಕನ ಕೆಲಸಕ್ಕಾಗಿ ಬಂದದ್ದು ವಿನಃ ಆತ ಎಂದೂ ಧಾರ್ಮಿಕ ಗುರು ಆಗಿರಲಿಲ್ಲ. ಅಂದಿನಿಂದ ದತ್ತಪೀಠದ ವ್ಯವಸ್ಥಾಪಕರಾಗಿ ಶಾಖಾದ್ರಿ ಮನೆತನ ಖಾಯಂಗೊಂಡಿದೆ ಅನ್ನೋದು ಹಿಂದೂ ಸಮುದಾಯ ಹಾಗೂ ದತ್ತಪೀಠದ ಹೋರಾಟಗಾರರ ವಾದ, ನಂಬಿಕೆಯಾಗಿದೆ.

02 4

1917ರಲ್ಲಿ ಬ್ರಿಟಿಷರು ಇದನ್ನ ಹಿಂದೂಗಳ ಧಾರ್ಮಿಕ ಕ್ಷೇತ್ರವೆಂದು ಗುರುತಿಸಿ ಮುಜರಾಯಿ ಇಲಾಖೆಗೆ ಸೇರಿಸಿದ್ದರಂತೆ. ಆದರೆ ಮುಜರಾಯಿ ಇಲಾಖೆಯಲ್ಲಿದ್ದ ದತ್ತಪೀಠವನ್ನ 1974ರಲ್ಲಿ ವಕ್ಫ್ ಬೋರ್ಡ್ ಗೆ ಸೇರಿಸಲಾಗಿದೆ ಎಂದು ದತ್ತಪೀಠದ ಹೋರಾಟಗಾರರು ಹೇಳುತ್ತಾರೆ. ಅಂದಿನಿಂದ ಸರ್ಕಾರದ ನಡೆಯನ್ನ ವಿರೋಧಿಸಿ ಹೋರಾಟಗಳು ಅಡಿಇಟ್ಟಿವೆ. 1980ರಿಂದ ಮತ್ತೆ ದತ್ತ ಜಯಂತಿಯ ದಿನ ಪೀಠಕ್ಕೆ ಹೋಗುವ ಸಂಪ್ರದಾಯ ಜನ್ಮತಾಳಿತು. 1980ರ ದಶಕದಲ್ಲೇ ದತ್ತಪೀಠದ ಹೋರಾಟಕ್ಕೆ ಸಮಿತಿ ಕೂಡ ರಚನೆಯಾಗಿತ್ತು. 1992ರಲ್ಲಿ ಆದಿಚುಚಂನಗಿರಿ ಪೀಠಾಧ್ಯಕ್ಷರ ನೇತೃತ್ವದಲ್ಲಿ ದತ್ತಪೀಠಕ್ಕೆ ತೆರಳಿದ್ದ ಹಿಂದೂ ಕಾರ್ಯಕರ್ತರು ದತ್ತಪೀಠದಲ್ಲಿ ಭಗವಧ್ವಜ ಹಾರಿಸಿದ್ದರು. ಅದೇ ಕಾರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಿ ಹಲವರನ್ನ ಬಂಧಿಸಿದ್ದರು. ದತ್ತಪೀಠದ ಮುಕ್ತಿಗಾಗಿ ಹೋರಾಡುತ್ತಿದ್ದ ಕಾರ್ಯಕರ್ತರು ತಿಂಗಳುಗಟ್ಲೆ ಜೈಲುವಾಸ ಕೂಡ ಅನುಭವಿಸಿದ್ದರು.

1980ರ ನಂತರ ದತ್ತಪೀಠದ ಹೋರಾಟದ ರೂಪುರೇಷೆ ಬದಲಾಗುತ್ತಾ ಸಾಗಿತು. ದತ್ತಪೀಠದ ಮುಕ್ತಿಗಾಗಿ 96-97ರಲ್ಲಿ ರಥಯಾತ್ರೆಗಳು ಆರಂಭವಾದವು. ನಾಡಿನಾದ್ಯಂತ ಜನಜಾಗೃತಿ ಉಂಟಾಯಿತು. ದತ್ತ ಜಯಂತಿ ಜೊತೆ ಒಂದು ವಾರಗಳ ಕಾಲ ಯಾವುದೇ ಜಾತಿ-ಬೇಧವಿಲ್ಲದೇ ದತ್ತ ಮಾಲಾಧಾರಣೆ ಮಾಡಿ, ವೃತವನ್ನ ಆಚರಿಸಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ, ಇರುಮುಡಿ ಸಮರ್ಪಣೆಗಳು ಆರಂಭವಾದವು. ಅಂದಿನಿಂದ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಈ ಹೋರಾಟಕ್ಕೆ ಶಕ್ತಿಯಾಗಿ ನಿಂತವು. 1980ರಿಂದ 20 ವರ್ಷಗಳ ನಿರಂತರ ಹೋರಾಟ ಹಾಗೂ ಜನಜಾಗೃತಿಯಿಂದ 2000ನೇ ಇಸವಿ ವೇಳೆಗೆ ದತ್ತಪೀಠದ ದತ್ತಜಯಂತಿಗೆ ಬರುವವರ ಸಂಖ್ಯೆ 50 ಸಾವಿರ ದಾಟಿತ್ತು. 2002ರ ಕಾಂಗ್ರೆಸ್ ಸರ್ಕಾರದ ಸಚಿವ ದಿ.ಡಿ.ಬಿ.ಚಂದ್ರೇಗೌಡರೇ ದತ್ತಪೀಠದ ದತ್ತಜಯಂತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದರು. ಆದರೆ 2004ರ ಬಳಿಕ ಪೀಠದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಹೋಮ-ಹವನಕ್ಕೆ ನಿಷೇಧ ಹೇರಲಾಯಿತು. ಆಗ ಹಿಂದೂ ಸಂಘಟನೆಗಳ ಹೋರಾಟ ಉಗ್ರರೂಪ ತಾಳಿತ್ತು. ಆಗಿನ್ನು ನೂತನವಾಗಿ ಶಾಸಕರಾಗಿದ್ದ ಸಿ.ಟಿ.ರವಿ ಸೇರಿ ಸಾಕಷ್ಟು ಕಾರ್ಯಕರ್ತರು ವಾರಗಟ್ಟಲೇ ಜೈಲಲ್ಲಿದ್ದರು. ಆದರೆ ಪ್ರಮುಖರ ಬಂಧನದ ಮಧ್ಯೆಯೂ ಚಿಕ್ಕಮಗಳೂರಿನ ನಾಲ್ಕು ದಿಕ್ಕಿನಿಂದಲೂ ಸಾವಿರಾರು ದತ್ತಭಕ್ತರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಿದ್ದು ಈಗ ಇತಿಹಾಸ.

DATTAPEETA FINAL 1

ಕಳೆದ ಮೂರ್ನಾಲ್ಕು ದಶಕಗಳಿಂದಲೂ ದತ್ತಪೀಠದ ಉಮೇದುವಾರಿಕೆಗಾಗಿ ಎರಡು ಸಮುದಾಯದವರು ಕೋರ್ಟ್ ಹೊರಗೆ ಹಾಗೂ ಒಳಗೆ ಹೋರಾಡುತ್ತಿದ್ದಾರೆ. ಪ್ರಕರಣ ಸುಪ್ರಿಂಕೋರ್ಟ್ ಕಟಕಟೆ ಕೂಡ ಹತ್ತಿದೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ದತ್ತಪೀಠದ ಉಮೇದುಗಾರಿಕೆ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಸೂಚಿಸಿತ್ತು. ಆದರೆ ನಾಗಮೋಹನ್ ದಾಸ ವರದಿ ಇದು ಮುಸ್ಲಿಮರಿಗೆ ಸೇರಿದ್ದು ಎಂದು ವರದಿ ನೀಡಿದ್ದರಿಂದ ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದವು. ನಾಗಮೋಹನ್ ದಾಸ್ ವರದಿಯನ್ನ ಕೋರ್ಟ್ ವಜಾ ಮಾಡಿತ್ತು. ಇದೀಗ ಕಳೆದ ಸಾಲಿನಲ್ಲಿದ್ದ ಬಿಜೆಪಿ ಸರ್ಕಾರ ದತ್ತಪೀಠದ ವ್ಯವಸ್ಥಾಪನಾ ಸಮಿತಿಯನ್ನ ನೇಮಕ ಮಾಡಿದೆ. ಈ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ಅರ್ಚಕರ ನೇಮಕವಾಗಿ, ಈಗ ಪ್ರತಿನಿತ್ಯ ತ್ರಿಕಾಲ ಪೂಜೆ ನೆರವೇರುತ್ತಿದೆ. ನಾಲ್ಕು ದಶಕಗಳ ಹೋರಾಟದ ಫಲವಾಗಿ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕವಾಗಿ ತ್ರಿಕಾಲ ಪೂಜೆ ನಡೆಯುತ್ತಿದೆ. ಆದರೆ ದತ್ತಪೀಠ ಸಂಪೂರ್ಣ ಹಿಂದೂಗಳಿಗೆ ಸೇರಬೇಕು. ಇಲ್ಲಿರುವ ಗೋರಿಗಳು ನಾಗೇನಹಳ್ಳಿಗೆ ಸ್ಥಳಾಂತರ ಆಗಬೇಕು. ಹಿಂದೂಗಳ ದತ್ತಪೀಠವೇ ಬೇರೆ. ಮುಸ್ಲಿಮರ ದರ್ಗಾವೇ ಬೇರೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರೋದು ದತ್ತಪೀಠ. ದತ್ತಪೀಠದಿಂದ 14 ಕಿ.ಮೀ. ದೂರದಲ್ಲಿರುವ ನಾಗೇನಹಳ್ಳಿಯಲ್ಲಿರೋದು ಮುಸ್ಲಿಮರ ದರ್ಗಾ. ದತ್ತಪೀಠ ಬಂದಮುಕ್ತವಾಗಬೇಕು. ಇಲ್ಲಿರುವ ಘೋರಿಗಳು ಸ್ಥಳಾಂತರವಾಗಬೇಕು. ಅಲ್ಲಿವರೆಗೂ ನಮ್ಮ ಹೋರಾಟ ವಿಶ್ರಮಿಸಲ್ಲ ಅನ್ನೋದು ಹೋರಾಟಗಾರರ ವಾದ ಹಾಗೂ ಸಂಕಲ್ಪವಾಗಿದೆ.

 

 

TAGGED:Baba Budan giriChikkamagaluruDattapeetahindumuslimಚಿಕ್ಕಮಗಳೂರುದತ್ತಪೀಠಬಾಬಾಬುಡನ್ ಗಿರಿಮುಸ್ಲಿಂಹಿಂದೂ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
6 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
6 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
7 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
7 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?