ಬೆಳಗಾವಿ: ಸಾಮಾನ್ಯವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರ ಧ್ವಜಾರೋಹಣದ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಿ ರಜೆ ಇರುವ ಕಾರಣ ತಮ್ಮ ಮನೆ ಮನೆಗಳಿಗೆ ತೆರಳುತ್ತಾರೆ. ಆದರೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆಸ್ಪತ್ರೆಯಲ್ಲಿ ಈ ಬಾರಿ ವಿಶೇಷವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ.
ಇಲ್ಲಿನ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಗಣರಾಜ್ಯೋತ್ಸವದ ನಿಮಿತ್ತ ದೇಶಭಕ್ತರ ವೇಷಭೂಷಣ ತೊಟ್ಟು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗಣರಾಜ್ಯೋತ್ಸವದ ಮಹತ್ವ ಸಾರುತ್ತಿದ್ದಾರೆ. ಮಹಿಳಾ ವೈದ್ಯರು ಹಾಗೂ ಸಿಬ್ಬಂದಿ ಕಿತ್ತೂರು ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿ ಭಾಯಿ, ಓಬವ್ವ ಸೇರಿದಂತೆ ವಿವಿಧ ಮಹಿಳಾ ಸಾಧಕರ ವೇಷಭೂಷಣ ತೊಟ್ಟು ಆಗಮಿಸಿದ್ದಾರೆ.
ಇತ್ತ ಪುರುಷ ವೈದ್ಯರು ಹಾಗೂ ಸಿಬ್ಬಂದಿ ಮಂಗಲ್ ಪಾಂಡೆ, ಶಿವಾಜಿ, ಬಾಲಗಂಗಾಧರ ತಿಲಕ, ಸಂಗೊಳ್ಳಿ ರಾಯಣ್ಣ ಸೇರಿದಂತೆ ವಿವಿಧ ಮಹಾನ್ ದೇಶಭಕ್ತರ ಉಡುಗೆ ತೊಟ್ಟು ಆಗಮಿಸಿ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಒಟ್ಟಿನಲ್ಲಿ ಕಾಟಾಚಾರಕ್ಕೆ ಧ್ವಜಾರೋಹಣ ಮಾಡಿ ಮನೆಗಳಿಗೆ ತೆರಳುವ ಅಧಿಕಾರಿಗಳಿಗೆ ನಿಜಕ್ಕೂ ಹುಕ್ಕೇರಿ ಸರ್ಕಾರಿ ವೈದ್ಯರು ಮಾದರಿಯಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv