ದಾವಣಗೆರೆ: ವೈದ್ಯಕೀಯ ಇತಿಹಾಸದಲ್ಲೇ ವಿರಳವೆನ್ನುವ ಶಸ್ತ್ರ ಚಿಕಿತ್ಸೆಯನ್ನು ದಾವಣಗೆರೆಯ ವೈದ್ಯರು ಮಾಡಿ ಯಶಸ್ವಿಯಾಗಿದ್ದಾರೆ.
ದಾವಣಗೆರೆಯ ಚಾಮರಾಜಪೇಟೆಯಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿದ್ದು, ತಾಯಿಯ ಗರ್ಭಕೋಶದಲ್ಲಿ ಬೆಳೆಯಬೇಕಿದ್ದ ಮಗುವು ಅಂಡಾಶಯದಲ್ಲಿ ಬೆಳೆದಿತ್ತು. ಇದರಿಂದ ವೈದ್ಯರು ಅನಿತಾ ರವಿ ಮತ್ತು ತಂಡದವರು ಶಸ್ತ್ರಚಿಕಿತ್ಸೆ ನಡೆಸಿ ಮಗುವನ್ನು ಹೊರ ತೆಗೆದಿದ್ದಾರೆ.
ಈ ಘಟನೆ ಭಾರತದ ಇತಿಹಾಸದಲ್ಲೇ ಪ್ರಥಮವಾಗಿದ್ದು, ಬಾಪೂಜಿ ಆಸ್ಪತ್ರೆಯ ವೈದ್ಯೆ ಅನಿತ ರವಿ ಅವರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಮಗುವನ್ನು ಹೊರ ತೆಗೆದಿದ್ದಾರೆ. ಫೆಬ್ರವರಿ 27ರಂದು ಶಸ್ತ್ರ ಚಿಕಿತ್ಸೆ ನಡೆದಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv