ಮೈಸೂರು: ಸಿಡಿಮದ್ದು ಸ್ಫೋಟಗೊಂಡು ಸಾಕುನಾಯಿ ಛಿದ್ರ ಛಿದ್ರಗೊಂಡಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡು ಪ್ರಾಣಿಗಳ ಬೇಟೆಗೆ ಅಕ್ರಮವಾಗಿ ಇರಿಸಿದ್ದ ಸಿಡಿಮದ್ದು ಸ್ಫೋಟವಾಗಿದೆ ಎಂದು ಹೇಳಲಾಗಿದೆ.
ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಕಪ್ಪಸೋಗೆ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ್ದ ಸಾಕುನಾಯಿಯ ಮುಖ ಛಿಧ್ರವಾಗಿದೆ. ಅಲ್ಲದೆ ಸ್ಫೋಟದ ಶಬ್ದಕ್ಕೆ ಜಾನುವಾರುಗಳು ಚೆಲ್ಲಾಪಿಲ್ಲಿಯಾಗಿ ಓಡಿವೆ. ಆತಂಕದಲ್ಲೇ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಛಿದ್ರವಾದ ನಾಯಿಯ ಮೃತ ದೇಹ ಕಂಡುಬಂದಿದೆ. ಇದನ್ನೂ ಓದಿ: ಬೃಂದಾವನದಲ್ಲಿ ಅನುಮತಿ ಇಲ್ಲದೇ ರಾತ್ರಿ ಶೂಟಿಂಗ್ – ಯೂಟ್ಯೂಬ್ ಅಡ್ಮಿನ್ ಅರೆಸ್ಟ್
ಈ ಸಂಬಂಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕೇರಳದಲ್ಲಿ ಕೂಡ ಆನೆಯೊಂದು ಸಿಡಿಮದ್ದಿನ ಸ್ಫೋಟಕ್ಕೆ ಮೃತಪಟ್ಟಿರುವುದನ್ನು ಇಲ್ಲಿ ಸ್ಮರಿಸಬಹುದು.