ಬೆಂಗಳೂರು: ಮನೆ ಮುಂದೆ ನಾಯಿ (Dog) ಕರೆದುಕೊಂಡು ಬಂದು ಗಲೀಜು ಮಾಡಿಸ್ತೀಯಾ ಎಂದು ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಮುನಿರಾಜು (69) ಕೊಲೆಯಾದ ವ್ಯಕ್ತಿ. ಬೆಂಗಳೂರಿನ (Bengaluru) ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಮೋದ್ ಮತ್ತು ರವಿಕುಮಾರ್ ನಾಯಿ ಜೊತೆಗೆ ಬಂದು ಮುನಿರಾಜು ಮನೆ ಮುಂದೆ ಸಿಗರೇಟ್ ಸೇದಿ ಸಮಸ್ಯೆ ಉಂಟು ಮಾಡಿದ್ದರು. ಈ ವಿಚಾರಕ್ಕೆ ಮುನಿರಾಜು ಪೊಲೀಸ್ ಠಾಣೆಗೆ ದೂರು ನೀಡಿದ್ದ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರಿಗೂ ಕರೆದು ಬೈದು ಬುದ್ಧಿ ಹೇಳಿ ಮುಚ್ಚಳಿಕೆ ಬರೆಸಲಾಗಿತ್ತು.
- Advertisement 2
- Advertisement 3
ಅದಾದ ಬಳಿಕ ಠಾಣೆಗೆ ಹೋಗಿ ಬಂದು ಮರುದಿನ ಮತ್ತೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಪ್ರಮೋದ್ ಮತ್ತು ರವಿಕುಮಾರ್ ದೊಣ್ಣೆಯಿಂದ ಮುನಿರಾಜುಗೆ ಹಲ್ಲೆ ಮಾಡಿದ್ದರು. ಘಟನೆಯಲ್ಲಿ ಮುನಿರಾಜು ಮೃತಪಟ್ಟಿದ್ದು, ಆತನ ಜೊತೆಯಿದ್ದ ಮುರುಳಿ ಎಂಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಈ ಕೊಲೆಗೆ ಪ್ರಮೋದ್ ಪತ್ನಿ ಪಲ್ಲವಿ ಸಹ ಸಾಥ್ ನೀಡಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಉದ್ಯೋಗಿಯಿಂದಲೇ ಬ್ಯಾಂಕ್ನಲ್ಲಿ ಗುಂಡಿನ ದಾಳಿ – 5 ಮಂದಿ ಸಾವು, 9 ಮಂದಿಗೆ ಗಾಯ
- Advertisement 4
ಘಟನೆಗೆ ಸಂಬಂಧಿಸಿ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ