ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರು ನೋಟಾಗೆ ಮತ ಹಾಕಿ ಎಂದು ಜನರಲ್ಲಿ ಕೇಳಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿಗೆ ಸ್ವತ: ಅವರೇ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ನೋಟಾಗೆ ಮತ ಹಾಕಿ ಎಂದು ನಾನು ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಕೆಲವರು ವದಂತಿಗಳನ್ನು ಹರಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಇದು ಆಧಾರ ರಹಿತವಾಗಿದೆ ಮತ್ತು ದುರುದ್ದೇಶಪೂರಿತವಾಗಿದೆ. ಬಿಜೆಪಿಗೆ ಮತ ನೀಡಿ, ಮೋದಿ ಮತ್ತೊಮ್ಮೆ, ದೇಶ ಮೊದಲು ಎಂದು ಬರೆದು ಟ್ವೀಟ್ ಮಾಡಿದ್ದಾರೆ.
It came to my knowledge that somebody is spreading rumours that I am asking people to vote for NOTA.
This is unfounded and malicious.
For me it's
VOTE BJP
Modi Again
National First @BJP4India @BJP4Karnataka
— Tejaswini AnanthKumar (@Tej_AnanthKumar) April 14, 2019
ರಾಜ್ಯ ಬಿಜೆಪಿಯ ಉಪಾಧ್ಯಕ್ಷೆಯಾಗಿರುವ ತೇಜಸ್ವಿನಿ ಅನಂತ್ ಕುಮಾರ್ ಅವರು ಭಾನುವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಡಿವಿ ಸದಾನಂದ ಗೌಡರ ಪರವಾಗಿ ಮತಯಾಚನೆ ಮಾಡಿದ್ದಾರೆ.