ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಬೇಡಿ- ಬಿಜೆಪಿ ಶಾಸಕ ಮಾಧುಸ್ವಾಮಿ

Public TV
1 Min Read
MADHUSWAMY 1 copy

ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಒಪ್ಪಿಸಬೇಡಿ ಎಂದು ಶಾಸಕ ಮಾಧುಸ್ವಾಮಿ ಆಗ್ರಹಿಸಿದ್ದಾರೆ.

ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತನಿಖೆ ಶಾಸನ ಸಭೆಯ ಅಧ್ಯಕ್ಷರಿಂದ ನಡೆಯಬೇಕು ಎಂದು ನಾವು ಬಹಳ ಸ್ಪಷ್ಟವಾಗಿಯೇ ಹೇಳಿದ್ದೇವೆ. ಅವರು ನೇಮಕ ಮಾಡಬಹುದಾದ ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಮ್ಮ ಅಪೇಕ್ಷೆಯಾಗಿದೆ. ಯಾಕಂದ್ರೆ ಈ ಎಲ್ಲಾ ಹಗರಣಗಳ ರೂವಾರಿ ಮುಖ್ಯಮಂತ್ರಿಗಳಾಗಿದ್ದಾರೆ.

CM HDK 1

ಅಕಸ್ಮಾತ್ ಯಾರೋ ಒಬ್ಬರು ಸದಸ್ಯ ಸ್ಪೀಕರ್ ಬಗ್ಗೆ ಮಾತನಾಡಿದ್ರೂ ಕೂಡ ಅದನ್ನು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಸಾರ್ವಜನಿಕವಾಗಿ ಚರ್ಚೆಗೆ ಬರುವಂತಹ ಸ್ಥಿತಿಗೆ ತಂದಿದ್ದಾರೆ. ಆ ಮಾತಿಗೆ ಇಷ್ಟೊಂದು ಪ್ರಚಾರ ಕೊಡದೇ ಹೋಗಿದ್ರೆ ಇಂದು ರಮೇಶ್ ಕುಮಾರ್ ಅವರು ಈ ರೀತಿ ಮಾತನಾಡಬೇಕಾದ ಅಗತ್ಯ ಇರಲಿಲ್ಲ ಅಂದ್ರು.

ಯಾರೋ ಖಾಸಗಿಯಾಗಿ ಮಾತನಾಡಿದ್ದನ್ನು ಪ್ರಚಾರ ಕೊಟ್ಟು ಶಾಸನ ಸಭಾ ಅಧ್ಯಕ್ಷರ ಸ್ಥಾನಕ್ಕೆ ಕಳಂಕ ಬಂತು ಎಂದು ಹೇಳಿ ಅವರು ಮನಸ್ಸಿಗೆ ತೆಗೆದುಕೊಂಡಿದ್ದಾರೆ. ಇವರಿಗೆ ಗೊತ್ತಿತ್ತಲ್ವ ಅವರು ಬಹಳ ಸೂಕ್ಷ್ಮವಾದ ವ್ಯಕ್ತಿಯಾಗಿದ್ದು, ಅವರು ಇಂತಹ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿಗೆ ಗೊತ್ತಿದ್ದು ಅವರು ಅದನ್ನು ಸಾರ್ವಜನಿಕವಾಗಿ ಮಾತಾಡಿ ಇಷ್ಟೊಂದು ದೊಡ್ಡ ಸುದ್ದಿ ಮಾಡುವ ಅವಶ್ಯಕತೆ ಇರಲಿಲ್ಲ. ಚರ್ಚೆಯನ್ನು ಮೊದಲನೇ ಪಾರ್ಟ್‍ಗೆ ನಿಲ್ಲಬಹುದಾಗಿತ್ತು. ತನಿಖೆ ಶುರುವಾದಾಗ ಇದನ್ನು ಹೇಳಬಹುದಾಗಿತ್ತು. ಅವರ ಅಧೀನದಲ್ಲಿರುವ ಇಲಾಖೆಗಳು, ತನಿಖಾ ಸಂಸ್ಥೆಗಳಿಂದ ನ್ಯಾಯವಾದ ತನಿಖೆ ಆಗುತ್ತೆ ಎಂದು ನಮಗೆ ವಿಶ್ವಾಸ ಇಲ್ಲ. ಹೀಗಾಗಿ ಮರುಪರಿಶೀಲನೆ ಮಾಡಿ ಎಂದು ಸದನದಲ್ಲಿ ಸ್ಪೀಕರ್ ಅವರನ್ನು ಕೇಳಿಕೊಳ್ಳುವುದಾಗಿ ಹೇಳಿದ್ದಾರೆ.

Speaker Cry copy

ಸ್ಪೀಕರ್ ಬಗ್ಗೆ ಮಾತನಾಡಿರುವವರನ್ನು ಬಿಟ್ಟು ಬಿಡಿ ಎಂದು ಹೇಳುವ ಸ್ಥಿತಿಯಲ್ಲಿ ನಾವಿಲ್ಲ. ಆದ್ರೆ ಅವರಿಗೆ ಅವಕಾಶ ಕೊಡಬೇಡಿ ಎಂದು ಅವರು ಮನವಿ ಮಾಡಿಕೊಂಡರು. ಇದೇ ವೇಳೆ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರು ಎಸ್‍ಐಟಿ ತನಿಖೆಯನ್ನು ವಿರೋಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *