Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

Latest

ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

Public TV
Last updated: April 12, 2025 4:22 pm
Public TV
Share
2 Min Read
Mamata Banerjee 4
SHARE

– ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಪ್ರತಿಭಟನೆ, ಹಿಂಸಾಚಾರ

ಕೋಲ್ಕತ್ತಾ: ತಮ್ಮ ಸರ್ಕಾರವು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Act) ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ ಎಂದು ಅವರು ಸಮುದಾಯಗಳಿಗೆ ಮನವಿ ಮಾಡಿದ್ದಾರೆ.

ವಕ್ಫ್ ಕಾಯ್ದೆ ವಿರುದ್ಧ ಮುರ್ಷಿದಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರದ ಬಳಿಕ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲಾ ಧರ್ಮದ ಜನರಿಗೆ ನನ್ನ ಪ್ರಾಮಾಣಿಕ ಮನವಿ. ದಯವಿಟ್ಟು ಶಾಂತವಾಗಿರಿ, ಸಂಯಮದಿಂದಿರಿ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ನಡವಳಿಕೆಯಲ್ಲಿ ತೊಡಗಬೇಡಿ. ಪ್ರತಿಯೊಬ್ಬ ಮಾನವ ಜೀವವೂ ಅಮೂಲ್ಯ. ರಾಜಕೀಯಕ್ಕಾಗಿ ಗಲಭೆಗಳನ್ನು ಪ್ರಚೋದಿಸಬೇಡಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ ಎಂದು ಅವರು X ಪೋಸ್ಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ| ಹಿಂಸಾಚಾರಕ್ಕೆ ತಿರುಗಿದ ವಕ್ಫ್‌ ಪ್ರತಿಭಟನೆ – ವಾಹನಗಳಿಗೆ ಬೆಂಕಿ, ರೈಲುಗಳ ಮೇಲೆ ಕಲ್ಲು

Violent Protests Erupt in Bengal Over Waqf Act Railway Tracks Blocked As Protests

ಅನೇಕರು ವಿರೋಧಿಸುವ ಕಾನೂನನ್ನು ನಾವು ಜಾರಿ ಮಾಡಿಲ್ಲ ಎನ್ನುವುದು ನೆನಪಿಡಬೇಕು. ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನೀವು ಬಯಸುವ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಾಗಿ, ಗಲಭೆ ಯಾವುದಕ್ಕಾಗಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಜನರು ನನ್ನ ಮನವೊಲಿಕೆಗೆ ಮಣಿಯಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಗಲಭೆಯನ್ನು ಪ್ರಚೋದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಮತಾ ಎಚ್ಚರಿಸಿದರು. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

Waqf

ವಕ್ಫ್ ತಿದ್ದುಪಡಿ ಕಾನೂನಿನ ವಿರುದ್ಧ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದು, ಪೊಲೀಸ್ ವ್ಯಾನ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ರಸ್ತೆಗಳನ್ನು ನಿರ್ಬಂಧಿಸಲಾಯಿತು. ಘಟನೆಯಲ್ಲಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ವಾಹನ ಮತ್ತು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

ಶನಿವಾರ ಬೆಳಿಗ್ಗೆಯಿಂದಲೇ ಮುರ್ಷಿದಾಬಾದ್‌ನ ಜಂಗಿಪುರ ಮತ್ತು ಸುಟಿ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಘಟನಾ ಸ್ಥಳದಿಂದ ಬಂದ ದೃಶ್ಯಗಳಲ್ಲಿ ಹಲವಾರು ವಾಹನಗಳು ಸುಟ್ಟು ಹಾನಿಗೊಳಗಾಗಿರುವುದು ಕಂಡುಬಂದಿದೆ. ಪೊಲೀಸರ ಪ್ರಕಾರ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ. ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿದ್ದ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿಲ್ಲ. ಇದನ್ನೂ ಓದಿ: ಶಿರೋಮಣಿ ಅಕಾಲಿ ದಳ ಅಧ್ಯಕ್ಷರಾಗಿ ಸುಖಬೀರ್ ಸಿಂಗ್ ಬಾದಲ್ ಮರು ಆಯ್ಕೆ

TAGGED:Mamata BanerjeeWaqf ActWaqf Amendment ActWest Bengalಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿವಕ್ಫ್ ತಿದ್ದುಪಡಿ ಕಾಯ್ದೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
4 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
5 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
6 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
7 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?