Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
Last updated: April 16, 2026 3:50 pm
Public TV
Share
3 Min Read
PM Modi 2
SHARE

– ಯಾವ ರಾಜ್ಯಕ್ಕೂ ಅನ್ಯಾಯ ಆಗಲ್ಲ, ದೇಶವನ್ನ ತುಂಡಾಗಿ ಯೋಚಿಸಬಾರದು
– ವಿಪಕ್ಷಗಳಿಗೂ ಲಾಭ ಇದೆ, ಪ್ರತಿಯೊಬ್ಬರಿಗೂ ಕ್ರೆಡಿಟ್‌ ನೀಡಲು ಸಿದ್ಧ

ನವದೆಹಲಿ: ಮಹಿಳಾ ಮೀಸಲಾತಿ ಬಿಲ್‌ (Womens Reservation Bill) ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸುವುದಿಲ್ಲ. ಈ ನಿರ್ಧಾರದ ಹಿಂದೆ ಮೋದಿಗೆ ರಾಜಕೀಯ ಸ್ವಾರ್ಥ ಇದೆ ಎಂದು ಇಲ್ಲಿ ಕೆಲವರಿಗೆ ಅನ್ನಿಸಿದೆ. ಇದನ್ನ ವಿರೋಧ ಮಾಡಿದರೆ ನಮಗೆ ರಾಜಕೀಯ ಲಾಭ ಅಂದುಕೊಂಡಿದ್ದಾರೆ. ನಮ್ಮಗೆ ಈ ವಿಚಾರದಲ್ಲಿ ಕ್ರೆಡಿಟ್‌ ಬೇಡ, ನಾಳೆ ಜಾಹೀರಾತು ಮೂಲಕ ಎಲ್ಲರಿಗೂ ಕ್ರೆಡಿಟ್ ನೀಡಲು ನಾವು ಸಿದ್ಧರಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra ModiP ಹೇಳಿದರು.

ಇದು ನಡೆದ ಸಂಸತ್‌ (Parliament) ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನ ವಿರೋಧಿಸುವವರು ಸುಧೀರ್ಘ ಕಾಲದವರೆಗೂ ಬೆಲೆ ತೆರಬೇಕಾಗುತ್ತದೆ ಎಂದು ಮಾತಿನಲ್ಲೇ ಕೌಂಟರ್‌ ಕೊಟ್ಟರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ನಿರ್ಣಾಯಕ ದಿನ ಇದು. ಮಹಿಳೆಯರಿಗೆ 33% ಮೀಸಲಾತಿ ಅಗತ್ಯವಿದೆ, ಪ್ರಜಾಪ್ರಭುತ್ವದಲ್ಲಿ ಕಾಲಮಾನಕ್ಕೆ ತಕ್ಕಂತೆ ಬದಲಾವಣೆ ಅಗತ್ಯವಿದೆ. ನಮ್ಮ ವ್ಯವಸ್ಥೆಯಲ್ಲಿ ಹೊಸ ಆಯಾಮ ತರುವ ಸುಸಂದರ್ಭ ಈಗ ಬಂದಿದೆ. ನಾವೇಲ್ಲ ಅದೃಷ್ಟವಂತರು, ಇಂತಹ ಮಹತ್ವದ ನೀತಿ ನಿಯಮಗಳ ಜಾರಿಯಲ್ಲಿ ಭಾಗಿಯಾಗಿದ್ದೇವೆ. ಎಲ್ಲ ಸಂಸದರು ಒಟ್ಟಾಗಿ ದೇಶಕ್ಕೆ ಹೊಸ ದಿಕ್ಕು ತೋರುತ್ತಿದ್ದೇವೆ. ಈ ನಿರ್ಧಾರ ದೇಶದ ರಾಜಕೀಯ ಸ್ವರೂಪವನ್ನು ನಿರ್ಧರಿಸಲಿದೆ. ಇದು ದೇಶದ ದಿಕ್ಕು ಬದಲಿಸುವ ನಿರ್ಣಯವುವೂ ಹೌದು. ದೇಶ ಹೊಸ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗುತ್ತಿದೆ, ʻವಿಕಸಿತ ಭಾರತ ಅಂದರೆ ಮೂಲಸೌಕರ್ಯಗಳ ಅಭಿವೃದ್ಧಿ ಅಷ್ಟೇ ಅಲ್ಲ, ವಿಕಸಿತ ಭಾರತ ಅಂದರೆ ನೀತಿ ನಿಯಮಗಳನ್ನ ರೂಪಿಸುವಲ್ಲಿ ಮಹಿಳೆಯರ ಪಾತ್ರವೂ ಅಗತ್ಯವಾಗಿದೆ. ನಾವು ಈಗಾಗಲೇ ವಿಳಂಬ ಮಾಡಿದ್ದೇವೆ, ಕಾರಣ ಯಾರೇ ಆಗಿರಬಹುದು, ಈಗ ನಾವು ಒಟ್ಟಾಗಿ ಇದನ್ನು ಮಾಡಬೇಕು ಅದಕ್ಕಾಗಿ ಎಲ್ಲ ನಾವು ಎಲ್ಲ ಪಕ್ಷಗಳನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದರು.

ಈ ಬಿಲ್‌ ವಿರೋಧಿಸುವವರನ್ನು ದೇಶದ ಮಹಿಳೆಯರು ಕ್ಷಮಿಸುವುದಿಲ್ಲ. ಇದು ರಾಜಕೀಯ ಹಿತಾಸಕ್ತಿ ವಿಚಾರ ಅಲ್ಲ. 2023 ರಲ್ಲಿ ಯಾರು ಇದನ್ನು ವಿರೋಧಿಸಿದ್ದರೋ ಅವರು ಇಂದು ಇಲ್ಲಿಲ್ಲ. ವಿಪಕ್ಷಗಳಿಗೂ ಇದರಲ್ಲಿ ಲಾಭ ಇದೆ, ಇದನ್ನ ರಾಜಕೀಯಗೊಳಿಸುವುದು ಬೇಡ ಎಂದು ತಿಳಿವಳಿಕೆ ನೀಡಿದರು.

ಪಂಚಾಯತ್‌ಗಳಲ್ಲಿ ಮೀಸಲಾತಿ ನೀಡಲು ಯಾವುದೇ ಆಕ್ಷೇಪ ಇಲ್ಲ. ಏಕೆಂದ್ರೆ ನಮ್ಮ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಿದ್ದರು. ಆದರೆ ಲೋಕಸಭೆ ವಿಧಾನಸಭೆಯಲ್ಲಿ ಮೀಸಲಾತಿಗೆ ವಿರೋಧಿಸುತ್ತಿದ್ದರು, ಇಂದು ಹಾಗೇ ಯೋಚನೆ ಮಾಡುವ ತಪ್ಪು ಮಾಡಬೇಡಿ. ಇಂದು ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಆದ್ರೂ ಏಕೆ ಅವರಿಗೆ 33% ಮೀಸಲಾತಿ ನೀಡುವುದನ್ನ ತಡೆಯಲಾಗುತ್ತಿದೆ? ಇದನ್ನು ರಾಜಕೀಯವಾಗಿ ನೋಡಬೇಡಿ, ರಾಜಕೀಯ ಹಿತಕ್ಕಾಗಿ ಇದನ್ನ ಮಾಡಲಾಗುತ್ತಿದೆ. ವಿಕಸಿತ್ ಭಾರತಕ್ಕೆ ನಾರೀ ಶಕ್ತಿ ಅಗತ್ಯವಿದೆ ಎಂದು ಕರೆ ನೀಡಿದರು.

ಪ್ರಾಯಶ್ಚಿತ್ತದೊಂದಿಗೆ ಹಕ್ಕು ನೀಡುತ್ತಿದ್ದೇವೆ
33% ಮೀಸಲಾತಿ ಇದು ಪ್ರತಿಯೊಬ್ಬ ಮಹಿಳೆಯರ ಹಕ್ಕು. ಇದನ್ನು ಬಹಳ ವರ್ಷಗಳಿಂದ ತಡೆದಿದ್ದೇವೆ. ಪ್ರಾಯಶ್ಚಿತ್ತದೊಂದಿಗೆ ನಾವು ಅವರಿಗೆ ಅವರ ಹಕ್ಕು ನೀಡುತ್ತಿದ್ದೇವೆ. ಈಗಲೂ ತಾಂತ್ರಿಕ ಅಂಶಗಳನ್ನು ಇಟ್ಟು ತಡೆಯುವ ಯತ್ನ ನಡೆದಿದೆ. 2023 ರಲ್ಲಿ ಸರ್ವಾನುಮತದಿಂದ ಮಹಿಳಾ ಮೀಸಲಾತಿ ಮಸೂದೆಯನ್ನ ಒಪ್ಪಿಕೊಳ್ಳಲಾಗಿತ್ತು. ಅಂದು ಅದಕ್ಕೆ ರಾಜಕೀಯ ಬಣ್ಣ ಬಳಿಯಲಿಲ್ಲ. ಈಗ ಜನಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಜನಗಣತಿಗೆ ನಾವೇಲ್ಲ ಏನು ಪ್ರಯತ್ನ ಮಾಡಿದ್ದೇವೆ ಅದನ್ನು ಹೇಳಲಿದ್ದೇವೆ. 2023 ರಲ್ಲಿ 33% ಮೀಸಲಾತಿ ಕೂಡಲೇ ಜಾರಿಯಾಗಬೇಕು ಎನ್ನುವ ಒತ್ತಾಯ ಇತ್ತು. 2024 ರಲ್ಲಿ ಕಡಿಮೆ ಅವಧಿಯಲ್ಲಿ ಜಾರಿ ಸಾಧ್ಯವಿರಲಿಲ್ಲ. ಹೀಗಾಗಿ ಈಗ ಅದನ್ನು ಜಾರಿ ಮಾಡಲಾಗುತ್ತಿದೆ ಎಂದು ವಿವರಿಸಿದರು.

ದೇಶವನ್ನು ತುಂಡು ತುಂಡಾಗಿ ಯೋಚಿಸಬಾರದು
ಮುಂದುವರಿದು… ನಾವು ಇಲ್ಲಿ ಕೂತು ದೇಶವನ್ನು ತುಂಡು ತುಂಡಾಗಿ ಯೋಚಿಸಬಾರದು. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಒಟ್ಟಾಗಿ ಯೋಚಿಸಬೇಕು, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಅಥಾವ ಸಣ್ಣ ದೊಡ್ಡ ರಾಜ್ಯವಾಗಲಿ, ಯಾರ ಜೊತೆಗೂ ಬೇಧಭಾವ ಮಾಡುವುದಿಲ್ಲ. ಇದರಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಸ್ಥಾನಗಳ ಸಂಖ್ಯೆ ನ್ಯಾಯಯುತವಾಗಿ ಹೆಚ್ಚಳವಾಗಲಿದೆ ಎಂದು ತಿಳಿಸಿದರು.

TAGGED:bjpcongresslok sabhanarendra modiparliamentWomen's Reservation Billಕಾಂಗ್ರೆಸ್ನರೇಂದ್ರ ಮೋದಿನವದೆಹಲಿಬಿಜೆಪಿಮಹಿಳಾ ಮೀಸಲಾತಿ ಬಿಲ್ಲೋಕಸಭೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

JOB CUTS TECHIE UNEMPLOYMENT 1
Latest

Global Tech Layoffs| ಮೊದಲ 4 ತಿಂಗಳಿನಲ್ಲಿ 80 ಸಾವಿರ ಮಂದಿಗೆ ಗೇಟ್‌ಪಾಸ್‌

Public TV
By Public TV
53 seconds ago
4 Arrests 3 States Online Radicalisation Delhi Cops Bust Terror Module
Latest

ಯುವಕರ ಮೈಂಡ್‌ವಾಶ್‌ ಮಾಡಿ ಭಯೋತ್ಪಾದನೆಗೆ ಸೆಳೆಯಲು ಯತ್ನ – ನಾಲ್ವರು ಉಗ್ರರು ಅರೆಸ್ಟ್‌

Public TV
By Public TV
8 minutes ago
Priyanka Gandhi
Latest

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Public TV
By Public TV
41 minutes ago
heatwave
Kalaburagi

ಕಲಬುರಗಿಯಲ್ಲಿ ನಿತ್ಯ 44 ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
43 minutes ago
prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
52 minutes ago
Nida Khan TCS 1
Crime

Corporate Jihad| ನಿದಾ ಖಾನ್‌ ಎಲ್ಲಿದ್ದಾಳೆ ಅನ್ನೋದು ನನಗೂ ಗೊತ್ತಿಲ್ಲ: ಪತಿ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?