ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ (Bengaluru Mysuru Exprpessway) ಬದಿಗಳಲ್ಲಿ ಅಳವಡಿಸಲಾಗಿರುವ ಕಬ್ಬಿಣದ ಬೇಲಿ (Fence) ಸೇರಿದಂತೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ (Pratap Simha) ಬೇಲಿಗಳನ್ನು ಕದಿಯಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಸೋಮವಾರ ಇದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
- Advertisement 2
ಟ್ವಿಟ್ಟರ್ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ಸಂಸದ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ವಿದ್ಯುತ್ ಕಂಬಗಳ ಬ್ರೆಸಿಂಗ್ ಕದ್ದು ಗುಜರಿಗೆ ಹಾಕುತ್ತಿದ್ದಾರೆ ಎಂಬುದಕ್ಕೆ ತಾಜಾ ಉದಾಹರಣೆ ನೋಡಿ ಹಾಗೂ ವ್ಯತ್ಯಾಸವನ್ನು ಗಮನಿಸಿ ಎಂದು ಬರೆದುಕೊಂಡಿದ್ದಾರೆ.
- Advertisement 3
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ನಲ್ಲಿ ವಿದ್ಯುತ್ ಕಂಬಗಳ ಬ್ರೆಸಿಂಗ್ ಕದ್ದು ಗುಜರಿಗೆ ಹಾಕುತ್ತಿದ್ದಾರೆ ಎಂಬುದಕ್ಕೆ ತಾಜಾ ಉದಾಹರಣೆ ನೋಡಿ ಹಾಗು ವ್ಯತ್ಯಾಸ ಗಮನಿಸಿ. https://t.co/sW68Qvw3fS pic.twitter.com/fmPTpxsLC1
— Pratap Simha (@mepratap) June 5, 2023
- Advertisement 4
ಕಳ್ಳತನಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಪ್ರತಾಪ್ ಸಿಂಹ, ದಶಪಥ ಹೆದ್ದಾರಿಯ ಬದಿಗಳಲ್ಲಿ ಅಳವಡಿಸಿರುವ ಬೇಲಿಯನ್ನು ಕಳವು ಮಾಡಬೇಡಿ. ಇದು ನಿಮ್ಮದೇ ಹಣದಲ್ಲಿ ನಿರ್ಮಿಸಿರುವ ಯೋಜನೆ. ಇದರ ರಕ್ಷಣೆಯೂ ನಿಮ್ಮದೇ ಎಂದು ಜನರಲ್ಲಿ ವಿನಂತಿಸಿಕೊಂಡಿದ್ದರು. ಇದನ್ನೂ ಓದಿ: ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?
ದಕ್ಷಿಣ ಭಾರತದ ಮೊದಲನೇ ಪ್ರವೇಶ ಹಾಗೂ ನಿರ್ಗಮನ ನಿರ್ಬಂಧಿತ ಹೆದ್ದಾರಿಯಲ್ಲಿ ಯಾರೂ ಒಳ ಪ್ರವೇಶಿಸಬಾರದೆಂಬ ಉದ್ದೇಶದಿಂದ ಎರಡೂ ಕಡೆಗಳಲ್ಲಿ ಬೇಲಿ ಅಳವಡಿಸಿದ್ದೇವೆ. ಅವನ್ನು ತುಂಡರಿಸಿ ಕೊಂಡೊಯ್ಯುತ್ತಿರುವುದು ನಾಚಿಕೆಗೇಡಿನ ವಿಚಾರ. ಮನೆಯಲ್ಲಿರುವ ಅನಗತ್ಯ ವಸ್ತುಗಳನ್ನು ಗುಜರಿಗೆ ಹಾಕಿ. ಅದು ಬಿಟ್ಟು ಸಾರ್ವಜನಿಕರ ಆಸ್ತಿಗೆ ತೊಂದರೆ ನೀಡಬೇಡಿ ಎಂದಿದ್ದಾರೆ.
ಮೈಸೂರು, ಮಂಡ್ಯ, ರಾಮನಗರ ಭಾಗದಲ್ಲಿ ಯಾರಾದರೂ ತಂತಿ ಬೇಲಿ ಕಳ್ಳತನ ಮಾಡುವುದು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ. ರಾಜ್ಯ ಸರ್ಕಾರ ರಸ್ತೆ ಸುರಕ್ಷತೆ ಕಾಯ್ದೆಯಲ್ಲಿ ಬಿಡುಗಡೆ ಮಾಡುವ ಹಣದಲ್ಲಿ ಈ ಹೆದ್ದಾರಿಗೆ ಕೃತಕ ಬುದ್ದಿಮತ್ತೆ ಸಾಮರ್ಥ್ಯದ ಕ್ಯಾಮೆರಾಗಳನ್ನು ಅಳವಡಿಸಲು 80 ಕೋಟಿ ರೂ.ಯ ಅನುದಾನ ಕೋರಿದ್ದೇವೆ. ಅದನ್ನು ಅಳವಡಿಸುವವರೆಗೆ ಈ ಆಸ್ತಿಗಳನ್ನು ರಕ್ಷಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರತಾಪ್ ಸಿಂಹ ಕೋರಿದ್ದಾರೆ. ಇದನ್ನೂ ಓದಿ: ಹೆಸ್ಕಾಂಗೆ 13 ಸಾವಿರ ಕೋಟಿ ಅನುದಾನ ನೀಡಿ ಪುನಶ್ಚೇತನ ನೀಡಿದ್ದೆ: ಬೊಮ್ಮಾಯಿ