ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಇಂಡಿಯಾ) ಮರಳಲು ಬಯಸಿದರೆ ಅವರಿಗೆ ಒಕ್ಕೂಟದ ಬಾಗಿಲು ಸದಾ ತೆರೆದಿರುತ್ತದೆ ಎಂದು ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಹೇಳಿಕೆ ನೀಡಿದ್ದಾರೆ. ನಾಯಕತ್ವಕ್ಕಾಗಿ ಒಕ್ಕೂಟದಲ್ಲಿ ಒಳಜಗಳ ನಡೆಯುತ್ತಿರುವ ಹೊತ್ತಲ್ಲಿ ಈ ಹೇಳಿಕೆ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಮಂಗಳವಾರ ಆರ್ಜೆಡಿ (RJD) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಜನ್ಮದಿನವಾಗಿತ್ತು. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಜನ್ಮದಿನದಂದು ಆಯೋಜಿಸಲಾದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಪತ್ರಕರ್ತರು ಸಿಎಂ ನಿತೀಶ್ ಕುಮಾರ್ ಮರಳುವ ಬಗ್ಗೆ ಕೇಳಿದಾಗ ಬಾಗಿಲು ಸದಾ ತೆರೆದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಕ್ಫ್ ಕಾನೂನು ರದ್ದಾಗೋವರೆಗೂ ಹೋರಾಟ: ಯತ್ನಾಳ್
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಸಿಎಂ ನಿತೀಶ್ ಕುಮಾರ್ ಅವರಿಗಾಗಿ ಒಕ್ಕೂಟದ ಬಾಗಿಲು ತೆರೆದಿದೆ. ಅವರು ಒಗ್ಗೂಡಿ ಕೆಲಸ ಮಾಡಲಿ, ಮಹಾಮೈತ್ರಿಯೊಂದಿಗೆ ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಈ ಹೇಳಿಕೆ ರಾಷ್ಟ್ರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಎನ್ಡಿಎ ಪಾಳಯದ ಚಡಪಡಿಕೆಯನ್ನೂ ಹೆಚ್ಚಿಸಿದೆ. ಇದನ್ನೂ ಓದಿ: ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಘೋಷಣೆ
ಕೆಲ ದಿನಗಳ ಹಿಂದೆಯಷ್ಟೇ ಮಾತನಾಡಿದ್ದ ಲಾಲೂ ಪುತ್ರ ಮಾಜಿ ಡಿಸಿಎಂ ತೇಜಸ್ವಿ ಯಾದವ್, ನಿತೀಶ್ ಕುಮಾರ್ ಅವರು ಈಗ ಸುಸ್ತಾಗಿದ್ದಾರೆ. ಅವರಿಗೆ ಮಹಾಮೈತ್ರಿಕೂಟದ ಬಾಗಿಲು ಮುಚ್ಚಿದೆ. ಆದರೆ ಸಿಎಂ ನಿತೀಶ್ ಕುಮಾರ್ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಅದನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದರು. ಇದಾದ ಬಳಿಕ ಲಾಲೂ ಪ್ರಸಾದ್ ಅವರ ಈ ಹೇಳಿಕೆ ಎಲ್ಲರನ್ನೂ ಅಚ್ಚರಿಪಡಿಸಿದೆ. ಇದನ್ನೂ ಓದಿ: ನಿಖಿಲ್ಗೆ ರಾಜ್ಯಾಧ್ಯಕ್ಷ ಪಟ್ಟ – ಜೆಡಿಎಸ್ ಹಿರಿಯ ನಾಯಕರ ಅಸಮಾಧಾನ