ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್ (Double Murder) ನಡೆದಿದ್ದು, ಮತ್ತೆ ಸ್ಥಳೀಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಬೆಂಗಳೂರಿನ ಕುಂಬಾರಪೇಟೆಯ ಹರಿ ಮಾರ್ಕೆಟಿಂಗ್ (Kumbarapete Hari Marketing) ಒಳಗೆ ಹತ್ಯೆ ನಡೆದಿದ್ದು, ಮೃತರನ್ನು ಸುರೇಶ್ (55) ಹಾಗೂ ಮಹೇಂದ್ರ (68) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಭದ್ರ ಎಂದು ಹೇಳಲಾಗಿದೆ. ಇದನ್ನೂ ಓದಿ: ಶ್ರೀನಗರದಲ್ಲಿ ಪಂಜಾಬ್ ನಿವಾಸಿಯನ್ನು ಗುಂಡಿಟ್ಟು ಕೊಂದ ಭಯೋತ್ಪಾದಕರು
ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದ್ದು, ಸಂಬಂಧಿ ಭದ್ರ ಎಂಬಾತ ಚಾಕುವಿನಿಂದ ಇರಿದು, ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೂಕಬಳಿಕೆ ಆರೋಪ ಪ್ರಕರಣ – ಜೇಡ್ರಳ್ಳಿ ಕೃಷ್ಣಪ್ಪಗೆ ಜಾಮೀನು ಮಂಜೂರು!
ಸದ್ಯ ಹಲಸೂರು ಗೇಟ್ ಪೊಲೀಸರು (Halasuru Gate Police) ಸ್ಥಳಕ್ಕೆ ದೌಡಾಯಿಸಿದ್ದು, ಫೋರೆನ್ಸಿಕ್ (FSL) ವಿಭಾಗದ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನ ರವಾನೆ ಮಾಡಲಾಗುತ್ತಿದೆ. ಸೆಂಟ್ರಲ್ ಡಿಸಿಪಿ ಶೇಖರ್ ತೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಟಿ ಕಾಸಮ್ಮಲ್ ಮಗನಿಂದ್ಲೇ ಬರ್ಬರ ಹತ್ಯೆ
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಜೋಡಿ ಕೊಲೆ ಮಾಡಿರೋ ಬಗ್ಗೆ ಮಾಹಿತಿ ಬಂದಿತ್ತು. ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಅಂತ ಪ್ರಾಥಮಿಕವಾಗಿ ತಿಳಿದುಬಂದಿದೆ. ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಕೊಲೆ ಮಾಡಿದ ಆರೋಪಿ, ಕೊಲೆಯಾದವರಿಗೆ ದೂರದ ಸಂಬಂಧಿ ಎಂದು ತಿಳಿಸಿದ್ದಾರೆ.