BBMP ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 131ನೇ ಜನ್ಮ ದಿನಾಚರಣೆ

Public TV
Public TV - Digital Head
2 Min Read

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನವನ್ನು ಆಚರಿಸಲಾಯಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2022ನೇ ಸಾಲಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯ ಅಂಗವಾಗಿ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಇಂದು ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ವಿಶೇಷ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಡಾ. ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ನಾಡಿನ ಅನೇಕ ಗಣ್ಯರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ಇದನ್ನೂ ಓದಿ: ದೇಶಕ್ಕಾಗಿ ಬಾಬಾಸಾಹೇಬ್‌ ಅಂಬೇಡ್ಕರರು ಕಂಡ ಕನಸು ನನಸಾಗಿಸಲು ಬದ್ಧರಾಗೋಣ: ಮೋದಿ

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಗೆ ನನ್ನ ನಮನಗಳು. ಭಾರತದ ಪ್ರಗತಿಗಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ನಮ್ಮ ದೇಶಕ್ಕಾಗಿ ಅವರು ಕಂಡ ಕನಸನ್ನು ನಾವು ನನಸಾಗಿಸಲು ಬದ್ಧರಾಗುವ ದಿನ ಬಂದಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಂಗೋಲಿಯಲ್ಲಿ ಮೂಡಿಬಂದ 20 ಅಡಿ ಯಶ್ ಭಾವಚಿತ್ರ

ಬಾಬಾಸಾಹೇಬ್ ಅಂಬೇಡ್ಕರ್ ಅವರ 131 ನೇ ಜಯಂತಿಗೆ ನಮನಗಳು. ಭಾರತಕ್ಕೆ ಬಲವಾದ ಶಕ್ತಿಯ ಆಧಾರ ಸ್ತಂಭವಾದ ನಮ್ಮ ಪವಿತ್ರ ಸಂವಿಧಾನವನ್ನು ನೀಡಿದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ನನ್ನ ನಮನಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಗೌರವ ಸಮರ್ಪಿಸಿದ್ದಾರೆ.

Share This Article