ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ, ಮಳೆ, ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ಟರ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಮಾನ್ಯ @PriyankKharge ಅವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ,ಮಳೆ,ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ, ಆದರೆ ಸಂಪುಟ ಸಚಿವರಿಗೆ ಸರ್ಕಾರದ ಪರವಾಗಿ ಮಾತನಾಡುವ ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? (1/3) pic.twitter.com/Iq7bDTTNOS
— Dr Sudhakar K (@mla_sudhakar) November 14, 2021
ಟ್ವೀಟ್ನಲ್ಲಿ ಏನಿದೆ?
ಪ್ರಿಯಾಂಕ್ ಖರ್ಗೆಯವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ, ಮಳೆ, ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ. ಆದರೆ ಸಂಪುಟ ಸಚಿವರಿಗೆ ಸರ್ಕಾರದ ಪರವಾಗಿ ಮಾತನಾಡುವ ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಇದು ಕಾಂಗ್ರೆಸ್ ಮುಖಂಡರ ಹತಾಶೆ. ಜನರನ್ನು ಹೇಗಾದರೂ ದಾರಿ ತಪ್ಪಿಸಬೇಕೆನ್ನುವ ಆತುರದ ಪ್ರದರ್ಶನವಲ್ಲದೆ ಇನ್ನೇನೂ ಅಲ್ಲ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಅವರ ತಂದೆ ಮಾಡಿದ ಕೆಲಸ ಮರೆತಿದ್ದಾರೆ: ರಾಜೂಗೌಡ
ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೆ ಸರಿ ಪ್ರಿಯಾಂಕ್ ಖರ್ಗೆ ಐಟಿ ಸಚಿವರಾಗಿದ್ದಾಗ, ನಂತರ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಕೇವಲ ಅವರ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರೇ ಎಂದು ಒಮ್ಮೆ ನೆನೆಪು ಮಾಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದ ಈ ಅಪಪ್ರಚಾರ, ಸುಳ್ಳಿನ ರಾಜಕಾರಣವನ್ನು ಬಿಜೆಪಿ ಸಹಿಸುವುದಿಲ್ಲ. ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಸಚಿವರು ಮಾತ್ರವಲ್ಲ, ಪ್ರತಿಯೊಬ್ಬ ಕಾರ್ಯಕರ್ತ ಕೂಡ ಕಾಂಗ್ರೆಸ್ ಪಕ್ಷದ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನದ್ದು ಹುಳಿ ಹಿಂಡುವ ರಾಜಕಾರಣ: ಸಚಿವ ಸಿ.ಸಿ.ಪಾಟೀಲ್ ಟೀಕೆ