ಮಂಡ್ಯ: ಮಂಡ್ಯದಲ್ಲಿ (Mandya) ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ.ನಟರಾಜ್ (Dr Nataraj) ಬೆಂಗಳೂರಿನಲ್ಲಿ (Bengaluru) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂದು ಆರೋಪ ಮಾಡಲಾಗಿದೆ. ಈ ಆರೋಪವನ್ನು ಮಂಡ್ಯ ಡಿಹೆಚ್ಒ (DHO) ಡಾ.ಮೋಹನ್ ತಳ್ಳಿ ಹಾಕಿದ್ದಾರೆ.
ಡಾ.ನಟರಾಜ್ ಕುಣಿಗಲ್ ತಾಲೂಕಿನ ಚೌಡನಕುಪ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮಂಡ್ಯದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಅಧಿಕಾರ ವಹಿಸಿಕೊಂಡು ಮೂರು ತಿಂಗಳು ಆಗಿದೆ. ಆದರೆ ಇವರು ಕೆಲಸ ಮಾಡಿರುವುದು ಎರಡು ತಿಂಗಳು ಮಾತ್ರ. 30 ದಿನಗಳ ಕಾಲ ಆರೋಗ್ಯ ಸಮಸ್ಯೆ ಎಂದು ರಜೆ ಹಾಕಿದ್ದರು. ಕೌಟುಂಬಿಕ ಕಲಹದಿಂದಾಗಿ ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಕಾರ್ಯ ಒತ್ತಡವನ್ನು ನೀಡುತ್ತಿರಲಿಲ್ಲ. ಕೌಟುಂಬಿಕ ಕಲಹದಿಂದಾಗಿ ಮಾನಸಿಕ ಕಿರುಕುಳದಿಂದ ಬಳಲುತ್ತಿದ್ದ ನಟರಾಜ್ ಈ ಹಿಂದೆ ಮೂರು ಬಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದರು. ಇದನ್ನೂ ಓದಿ: ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್
ಕಳೆದ ನವೆಂಬರ್ 11 ರಂದು ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೊದಲು ಇದ್ದ ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯಾಗಿ ನೇಮಕ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಹಾಗೂ ಡಿಹೆಚ್ಒಗೆ ನಟರಾಜ್ ಪತ್ರ ಬರೆದ್ದರು. ಇವರ ಸಾವಿಗೆ ಇವರ ಕೌಟುಂಬಿಕ ಕಲಹದಿಂದ ಉಂಟಾದ ಮಾನಸಿಕ ಖಿನ್ನತೆಯೇ ಕಾರಣ. ಈ ಆತ್ಮಹತ್ಯೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಾ.ಮೋಹನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯ ಒತ್ತಡದ ನಡುವೆ ಕ್ಷೇತ್ರಕ್ಕೆ ಟೈಂ ಕೊಡಲು ಆಗ್ತಿಲ್ಲ: ಡಿಕೆಶಿ