ಬೆಂಗಳೂರು: ಕಳೆದ ಮೂರು ತಿಂಗಳಿಂದ ವಿವಿಧ ಕನ್ನಡಪರ ಸಂಘಟನೆಗಳು ಡಾ. ಸರೋಜಿನಿ ಮಹಿಷಿ ವರದಿಯನ್ನ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾಡುತ್ತಿರುವ ಧರಣಿ ಸತ್ಯಾಗ್ರಹ ಇಂದಿಗೆ 90 ದಿನ ಪೂರೈಸಿದೆ. ಆದರೆ ರಾಜ್ಯ ಸರ್ಕಾರದ ಮಾತ್ರ ಇನ್ನೂ ಈ ಬಗ್ಗೆ ಗಮನ ಹರಿಸಿಲ್ಲ. ಈ ನಡುವೆ ಇದೇ ತಿಂಗಳ 13ಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿವೆ.
ಇತ್ತ ಕರ್ನಾಟಕ ಬಂದ್ಗೆ ಹತ್ತು ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ನೀಡುತ್ತಿಲ್ಲ. ಜೊತೆಗೆ ನಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ ರಾಜ್ಯ ಬಂದ್ ಬೆಂಬಲವಿಲ್ಲವೆಂದು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಬಂದ್ ಮಾಡಬಾರದು ಅದಕ್ಕೆ ಅನುಮತಿ ನೀಡಬಾರದೆಂದು ಅನೇಕ ಸಂಘಟನೆಗಳು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಪತ್ರ ನೀಡಿದ್ದಾರೆ.