Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Districts

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Public TV
Last updated: August 14, 2025 11:09 pm
Public TV
Share
2 Min Read
Sharanabasappa Appa
SHARE

ಕಲಬುರಗಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ (90) ಅವರಿಂದು ಲಿಂಗೈಕ್ಯರಾಗಿದ್ದಾರೆ.

ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಯಾಗಿರೋ ಶರಣಬಸಪ್ಪ ಅಪ್ಪ ಅವರು ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾಗಿದ್ದು, ಕುಟುಂಬಸ್ಥರು, ಅಪಾರ ಬಂಧು ಬಳಗ ಹಾಗೂ ಅನುಯಾಯಿಗಳನ್ನ ಅಗಲಿದ್ದಾರೆ. ಇದನ್ನೂ ಓದಿ: ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

ಅನಾರೋಗ್ಯದಿಂದ ಅಸ್ವಸ್ಥರಾಗಿದ್ದ ಶರಣಬಸಪ್ಪ ಅಪ್ಪ ಅವರನ್ನ ಖಾಸಗಿ ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠದಲ್ಲೇ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ಕೆಲ ದಿನಗಳಿಂದೀಚೆಗೆ ಮಠದಲ್ಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಮೊದಲು ನಾವು ದಾಳಿ ಮಾಡಲ್ಲ, ಪ್ರತೀಕಾರ ತೀರಿಸಲು ಹಿಂದೆ ಸರಿಯಲ್ಲ: ಆಪರೇಷನ್ ಸಿಂಧೂರಕ್ಕೆ ದ್ರೌಪದಿ ಮುರ್ಮು ಮೆಚ್ಚುಗೆ

Sharanabasappa Appa 3

ಅಂತ್ಯ ಸಂಸ್ಕಾರಕ್ಕೆ ಬಿಗಿ ಬಂದೋಬಸ್ತ್‌
ಈ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾತನಾಡಿ, ರಾತ್ರಿ 9.20ರ ಸುಮಾರಿಗೆ ಶರಣಬಸಪ್ಪ ಅಪ್ಪ ಅವರು ಲಿಂಗೈಕರಾಗಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ಹೇಳಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನಲೆ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನದ ಬಗ್ಗೆ ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ಸಮಯ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಭಾಗದ ಶೈಕ್ಷಣಿಕ ಕ್ರಾಂತಿಕಾರ:
1935ರ ನವೆಂಬರ್‌ 14ರಂದು ಜನಿಸಿದ ಡಾ.ಶರಣಬಸಪ್ಪ ಅಪ್ಪ, ಸಂಸ್ಥಾನದ 7ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಹಾಗೂ ಗೋದುತಾಯಿ ಅವರ ಪುತ್ರ. 1957ರ ಫೆಬ್ರವರಿ 17ರಂದು ಕೋಮಲಾದೇವಿ ಅವರೊಂದಿಗೆ ವಿವಾಹವಾದರು. 1983ರಲ್ಲಿ ಸಂಸ್ಥಾನದ 8ನೇ ಪೀಠಾಧಿಪತಿಯಾಗಿ ನೇಮಕವಾದರು. 1993ರ ಮಾರ್ಚ್‌ 23ರಂದು ಕೋಮಲಾದೇವಿ ಅನಾರೋಗ್ಯದಿಂದ ನಿಧನ ಹೊಂದಿದರು. ಅದಾದ ಬಳಿಕ ಅಪ್ಪ ಅವರು 1993ರ ನ.30ರಂದು ಡಾ.ದ್ರಾಕ್ಷಯಣಿ ಅವ್ವಾಜಿ ಅವರೊಂದಿಗೆ 2ನೇ ವಿವಾಹವಾದರು.

Sharanabasappa Appa 2

ಇದರ ಹೊರತಾಗಿ ಧಾರವಾಡ ಕರ್ನಾಟಕ ವಿವಿಯ ಎಮ್.ಎ ತತ್ವಶಾಸ್ತ್ರದಲ್ಲಿ ಪದವಿ ಪಡೆದಿದ್ದ ಅಪ್ಪ ಅವರು ಧಾರವಾಡ ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. 1980ರಲ್ಲಿ ಗುಲಿ ವಿವಿಯ ಮೂಲಸೌಕರ್ಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ವಿವಿಗೆ ಭದ್ರ ಭೂನಾದಿ ಹಾಕಿಕೊಟ್ಟರು. 2003ರ ಏಪ್ರಿಲ್ 28ರಲ್ಲಿ ಸಂಸದ ಭವನದಲ್ಲಿ ಬಸವೇಶ್ವರ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. 2017ರಲ್ಲಿ ಕರ್ನಾಟಕ ಖಾಸಗಿ ವಿಶ್ವವಿದ್ಯಾಲಯ ಕಾಯ್ದೆ ಅಡಿ ಶರಣಬಸವ ವಿಶ್ವವಿದ್ಯಾಲಯ ಆರಂಭಿಸಿದ್ದರು. ಸದ್ಯ ಅಪ್ಪಾಜಿ ನಿರ್ಮಿಸಿದಂತಹ ಶಿಕ್ಷಣ ಸಂಸ್ಥೆಗಳಲ್ಲಿ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ವಿದ್ಯಾಭ್ಯಾಸ ನಡೆಯುತ್ತಿದೆ. 1991ರಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

ಪ್ರಶಸ್ತಿ, ಗೌರವಗಳು
* ಕರ್ನಾಟಕ ಸರ್ಕಾರದಿಂದ 1988ರಲ್ಲಿ ಕರ್ನಾಟಕ ರಾಜ್ಯೋ ಪ್ರಶಸ್ತಿ
* 1999ರಲ್ಲಿ ಗುಲಬರ್ಗಾ ವಿವಿ ಇಂದ ಗೌರವ ಡಾಕ್ಟರೇಟ್ ಪ್ರಧಾನ
* ಹಲವಾರು ವರ್ಷಗಳ ಕಾಲ ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರಾಗಿ ಸೇವೆ
* ಲಲಿತ ಕಲಾ ಅಕಾಡೆಮಿ ವತಿಯಿಂದ ಕಲಾ ಪೋಷಿತ್ ಪ್ರಶಸ್ತಿ ಪ್ರಧಾನ

Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Hassan 2nd PUC Exam
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
10 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
37 minutes ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
40 minutes ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
57 minutes ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
58 minutes ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?