ಪೇಜಾವರರನ್ನು ಭಗವಾನ್ ಕೃಷ್ಣನೇ ಕಾಪಾಡುತ್ತಾನೆ: ಡಾ. ವೀರೇಂದ್ರ ಹೆಗ್ಗಡೆ

Public TV
1 Min Read
Pejawar Sri Veerendra hegde

ಉಡುಪಿ: ಪೂಜ್ಯ ಪೇಜಾವರ ಶ್ರೀಗಳು ಅನಾರೋಗ್ಯದಿಂದಿದ್ದಾರೆ. ಐಸಿಯುನಲ್ಲಿರೋದನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ವಯೋಧರ್ಮ ಪ್ರಕಾರ ನಿಧಾನ ಸ್ಪಂದನೆ ಆಗ್ತಾಯಿದೆ. ಸ್ವಾಮೀಜಿಗಳಿಗೆ ಬೇರೆ ಯಾವುದೇ ಕಾಯಿಲೆ, ಅಡ್ಡ ರೋಗ ಇಲ್ಲ. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಸ್ವಾಮೀಜಿಗಳಿಗೆ ಶೀಘ್ರ ಆರೋಗ್ಯ ವೃದ್ಧಿಯಾಗಲಿ. ಇಡೀ ದೇಶ ಅವರಿಗಾಗಿ ಪ್ರಾರ್ಥನೆ ಮಾಡುತ್ತಿದೆ. ಅವರು ಸದಾ ದೇವರ ಸಾನಿಧ್ಯದಲ್ಲೇ ಇದ್ದವರು. ದೇವರು ಅವರನ್ನು ಶೀಘ್ರ ಗುಣಮುಖ ಮಾಡುತ್ತಾರೆ. ಅಗತ್ಯ ಇಲ್ಲದ ಅಪಪ್ರಚಾರ ಬೇಡ. ಯಾರೂ ಮನಸ್ಸನ್ನು ವ್ಯಸ್ಥ ಮಾಡಿಕೊಳ್ಳಬೇಡಿ. ಕೆಟ್ಟ ಸಂದೇಶ ಬರಲ್ಲ, ಒಳ್ಳೆ ಸಂದೇಶ ಬರುತ್ತದೆಯೆಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

Pejawara Sri 2

ಆಸ್ಪತ್ರೆಗೆ ಆಗಮಿಸಿದ ಸಚಿವ ಈಶ್ವರಪ್ಪ:
ಸಚಿವ ಕೆ.ಎಸ್.ಈಶ್ವರಪ್ಪ ಎರಡನೇ ಬಾರಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಪೇಜಾವರ ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗಿದೆ. ನಿನ್ನೆಗಿಂತ ಇಂದು ಹೆಚ್ಚಿನ ಸುಧಾರಣೆಯಾಗಿದೆ. ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಖುದ್ದು ನಾನೇ ನೋಡಿದಾಗಲೂ ನನಗೂ ಹಾಗೇ ಅನಿಸಿದೆ. ಅಯೋಧ್ಯೆ ರಾಮಮಂದಿರ ಆಗುವವರೆಗೆ ನಾನಿರಬೇಕು ಎಂಬ ಆಸೆ ಅವರಿಗಿತ್ತು. ಅವರ ಆಸೆಯನ್ನು ಉಡುಪಿಯ ಶ್ರೀ ಕೃಷ್ಣ ನೆರವೇರಿಸುತ್ತಾನೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು. ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳನ್ನು ಸೃಷ್ಠಿ ಮಾಡಲಾಗುತ್ತಿದೆ. ವದಂತಿಗಳಿಗೆ ಯಾರು ಕಿವಿಗೊಡಬೇಡಿ. ಶ್ರೀಗಳ ಆರೋಗ್ಯ ಸಾಕಷ್ಟು ಸುಧಾರಣೆ ಆಗ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

UDP Pejawar K. S. Eshwarappa

ಈ ನಡುವೆ ಎರಡು ದಿನಗಳಿಂದ ಪೇಜಾವರ ಶ್ರೀಗಳ ಶಿಷ್ಯೆ ನೀರಾ ರಾಡಿಯಾ ಕೆಎಂಸಿಯಲ್ಲೇ ಇದ್ದಾರೆ. ಕಾರ್ಪೋರೇಟ್ ಜಗತ್ತಿನ ಪ್ರಭಾವಿ ಮಹಿಳೆ ಆಗಿರುವ ನೀರಾ ರಾಡಿಯಾ, ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆಯಿಂದ ಆಸ್ಪತ್ರೆಯಲ್ಲಿದ್ದು, ತಜ್ಞ ವೈದ್ಯರ ಜೊತೆಗೆ ಕೆಎಂಸಿ ಗೆ ಬಂದು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನೀರಾ ರಾಡಿಯಾ ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಇದೆ. ನಿನ್ನೆಗಿಂತ ಇವತ್ತು ಮತ್ತಷ್ಟು ಚೇತರಿಸಿಕೊಂಡಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *