ನವದೆಹಲಿ: ಮುಂದಿನ ತಿಂಗಳು ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಬೆನ್ನಲ್ಲೇ ಕರ್ನಾಟಕದವರಿಗೆ ಈ ಪಟ್ಟ ಒಲಿಯಬಹುದು ಅನ್ನೋ ಸುದ್ದಿ ಹಬ್ಬಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಎನ್ಡಿಎ ತನ್ನ ಅಭ್ಯರ್ಥಿಯಾಗಿ ಪರಿಗಣಿಸಬಹುದು ಅನ್ನೋ ಮಾತು ಕೇಳಿಬಂದಿದೆ.
ಭಾನುವಾರವಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರನ್ನೊಳಗೊಂಡ ಮೂವರ ಸಮಿತಿಯನ್ನು ರಚಿಸಿದ್ದಾರೆ. ರಾಷ್ಟ್ರಪತಿ ಚುನಾವಣೆ ಸಂಬಂಧ ವಿಪಕ್ಷಗಳು ಸೇರಿದಂತೆ ಸರ್ವಪಕ್ಷಗಳ ಜೊತೆಗೆ ಚರ್ಚಿಸಿ ಒಮ್ಮತ ಮೂಡಿಸುವ ಜವಾಬ್ದಾರಿ ನೀಡಲಾಗಿದೆ.
ಇತ್ತ ಬುಧವಾರದಂದು ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸಭೆ ನಡೆಸಲಿವೆ. ಅಲ್ಲೂ ಅಭ್ಯರ್ಥಿ ಆಯ್ಕೆಗಾಗಿ 10 ಮಂದಿ ಸದಸ್ಯರ ಉಪ ಸಮಿತಿಯನ್ನು ರಚಿಸಲಾಗಿದೆ. ಜುಲೈ 17ರಂದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಜೂನ್ 28ರೊಳಗೆ ನಾಮಪತ್ರ ಸಲ್ಲಿಸಬೇಕು. ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ರಂದು ಹೊಸ ರಾಷ್ಟ್ರಪತಿಯ ಯುಗಾರಂಭವಾಗಲಿದೆ.
Veerendra Hegde the spiritual leader as next president? Great.
— MRV (@MRVChennai) June 12, 2017