Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

Cinema

ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

Public TV
Last updated: June 23, 2025 3:01 pm
Public TV
Share
2 Min Read
Dr. Vishnuvardhan 75 Preparations for the Amrit Mahotsav Kannada Cinema Meeting veerakaputra srinivasa Rajendra Singh Babu
SHARE

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು ‘ಯಜಮಾನರ ಅಮೃತ ಮಹೋತ್ಸವ’ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ.

ಈ ವಿಷಯವಾಗಿ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಈ ಘನಕಾರ್ಯಕ್ಕೆ ಸಂದೇಶವನ್ನು ಕಳುಹಿಸಿಕೊಟ್ಟು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವು ಈಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಹಾಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ನರಸಿಂಹಲು ಅವರು ಕೂಡ ಇದೇ ಮಾತುಗಳನ್ನು ಹೇಳಿ, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಅವರು ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ

veerakaputra srinivasa

ರಾಜೇಂದ್ರಸಿಂಗ್ ಬಾಬು ಅವರು ಮಾತನಾಡಿ, ಈ ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಈ ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ನಂತರ ಮಾತನಾಡಿದ ಎಸ್. ನಾರಾಯಣ್ ಅವರು, ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂಬ ಸಂತೋಷವನ್ನು ಹೊರಹಾಕಿದರು.

ಕೊನೆಯಲ್ಲಿ ಮಾತನಾಡಿದ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವೀರಕಪುತ್ರ ಶ್ರೀನಿವಾಸ್ ಅವರು, ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.

TAGGED:Rajendra Singh BabuVeerakaputra SrinivasaVishnuvardhan 75ರಾಜೇಂದ್ರ ಸಿಂಗ್ ಬಾಬುರಾಜೇಂದ್ರ ಸಿಂಗ್‌ ಬಾಂಬ್‌ವಿಷ್ಣುವರ್ಧನ್‌ 75ವೀರಕಪುತ್ರ ಶ್ರೀನಿವಾಸ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Wilson Garden
Bengaluru City

ಗಂಡನ ಸೈಕೋ ವರ್ತನೆ ವಿರುದ್ಧ ದೂರು – ನಗ್ನ ಫೋಟೋ ತೆಗೆದು ಬ್ಲ್ಯಾಕ್‌ ಮೇಲ್‌ ಅಂತ ಪತಿ ಪ್ರತಿದೂರು!

Public TV
By Public TV
1 minute ago
Chandrashekar Death
Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
By Public TV
26 minutes ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
35 minutes ago
Karnataka State Budget 2025 Siddaramaiah
Bengaluru City

ಮಾರ್ಚ್ 6 ರಂದು ರಾಜ್ಯ ಬಜೆಟ್ ಮಂಡನೆಗೆ ಚಿಂತನೆ

Public TV
By Public TV
57 minutes ago
Swathi Shanthakumar
Bengaluru City

ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ

Public TV
By Public TV
1 hour ago
Bheemanna Khandre Eshwar Khandre
Bidar

ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು – ತಂದೆಯ ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?