Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

Cinema

ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ

Public TV
Last updated: June 23, 2025 3:01 pm
Public TV
Share
2 Min Read
Dr. Vishnuvardhan 75 Preparations for the Amrit Mahotsav Kannada Cinema Meeting veerakaputra srinivasa Rajendra Singh Babu
SHARE

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು ‘ಯಜಮಾನರ ಅಮೃತ ಮಹೋತ್ಸವ’ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ.

ಈ ವಿಷಯವಾಗಿ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಈ ಘನಕಾರ್ಯಕ್ಕೆ ಸಂದೇಶವನ್ನು ಕಳುಹಿಸಿಕೊಟ್ಟು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವು ಈಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಹಾಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ನರಸಿಂಹಲು ಅವರು ಕೂಡ ಇದೇ ಮಾತುಗಳನ್ನು ಹೇಳಿ, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಅವರು ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ

veerakaputra srinivasa

ರಾಜೇಂದ್ರಸಿಂಗ್ ಬಾಬು ಅವರು ಮಾತನಾಡಿ, ಈ ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಈ ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ನಂತರ ಮಾತನಾಡಿದ ಎಸ್. ನಾರಾಯಣ್ ಅವರು, ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂಬ ಸಂತೋಷವನ್ನು ಹೊರಹಾಕಿದರು.

ಕೊನೆಯಲ್ಲಿ ಮಾತನಾಡಿದ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವೀರಕಪುತ್ರ ಶ್ರೀನಿವಾಸ್ ಅವರು, ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.

TAGGED:Rajendra Singh BabuVeerakaputra SrinivasaVishnuvardhan 75ರಾಜೇಂದ್ರ ಸಿಂಗ್ ಬಾಬುರಾಜೇಂದ್ರ ಸಿಂಗ್‌ ಬಾಂಬ್‌ವಿಷ್ಣುವರ್ಧನ್‌ 75ವೀರಕಪುತ್ರ ಶ್ರೀನಿವಾಸ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
41 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
1 hour ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
2 hours ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?