– ಭಾರತೀಯ ಸಂಸ್ಕೃತಿಯ ಉಡುಗೆ ಧರಿಸಿ ಬರುವಂತೆ ಸೂಚನೆ
ಕಾರವಾರ: ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ಮಾರಿಕಾಂಬ ದೇವಸ್ಥಾನದಲ್ಲಿ ಆಡಳಿತ ಕಮಿಟಿ ವಸ್ತ್ರಸಂಹಿತೆಯನ್ನು ಜಾರಿ ಮಾಡಿದೆ.
- Advertisement -
ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆಗಳನ್ನು ಧರಿಸಿ ಬರುವಂತೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.ಇದನ್ನೂ ಓದಿ: ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು
- Advertisement -
- Advertisement -
ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ ಆದೇಶ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯದ ವಿವಿಧ ದೇಗುಲಗಳ ಜೊತೆ ಶಿರಸಿಯಲ್ಲಿಯೂ ವಸ್ತ್ರಸಂಹಿತೆ ಕಡ್ಡಾಯ ಮಾಡಲಾಗಿದೆ. ನವರಾತ್ರಿಯ ಸಂದರ್ಭದಲ್ಲಿ ಭಕ್ತರು ಹೆಚ್ಚು ಬರುತಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆಗಳನ್ನು ಕಡ್ಡಾಯ ಮಾಡುವ ಉದ್ದೇಶವಿದೆ.
- Advertisement -
ಇದಕ್ಕೆ ಸಂಬಂಧಿಸಿದಂತೆ ಶಿರಸಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ್ ಮಾತನಾಡಿದ್ದು, ದೇವಸ್ಥಾನಕ್ಕೆ ಹೋಗುವಾಗ ಸಂಪ್ರದಾಯ ಪಾಲನೆ ಮಾಡಬೇಕೆಂಬ ಉದ್ದೇಶದಿಂದ ಈ ಆದೇಶ ಮಾಡಲಾಗಿದೆ. ಭಕ್ತರ ಸ್ಪಂದನೆ ಕೂಡಾ ಪರಿಗಣಿಸಿ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು – ಎನ್ಸಿಆರ್ ದಾಖಲು