ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಪುರೋಹಿತ (Priest) ಸಾವನ್ನಪ್ಪಿದ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ (Srinivasapura) ತಾಲೂಕಿನ ಬದ್ದಿಪಲ್ಲಿ ಕ್ರಾಸ್ ಸಮೀಪ ನಡೆದಿದೆ.
ಗುಡಿಪಲ್ಲಿ ಗ್ರಾಮದ ಲೋಕೇಶ್ (45) ಮೃತ ವ್ಯಕ್ತಿ. ವೃತ್ತಿಯಲ್ಲಿ ಪುರೋಹಿತರಾಗಿರುವ ಲೋಕೇಶ್ ಕಾರ್ಯಕ್ರಮ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ
ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

