ರಾಯಚೂರು: ಬಸ್ (Bus) ಚಲಾಯಿಸುತ್ತಿದ್ದ ವೇಳೆಯೇ ಚಾಲಕನಿಗೆ (Driver) ಹೃದಯಾಘಾತವಾಗಿ (Heart Attack), ಬಸ್ ಪಲ್ಟಿಯಾಗಿರುವ ಘಟನೆ ಸೋಮವಾರ ರಾಯಚೂರು (Raichur) ಜಿಲ್ಲೆಯ ಲಿಂಗಸೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ಬಸ್ ಚಾಲಕ ಶ್ರೀನಿವಾಸ್ (51) ಎಂದು ಗುರುತಿಸಲಾಗಿದೆ.
ಚಾಲಕನಿಗೆ ಹೃದಯಾಘಾತವಾದ ವೇಳೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆ ಪಕ್ಕದ ಹೊಲಕ್ಕೆ ಬಸ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 14 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಪತಿ ಜಾನ್ ಶಾ ನಿಧನ
ರಾಯಚೂರಿನಿಂದ ಬೆಳಗಾವಿಗೆ ಹೊರಟಿದ್ದ ರಾಜಹಂಸ ಬಸ್ನಲ್ಲಿ 31 ಜನ ಪ್ರಯಾಣಿಸುತ್ತಿದ್ದರು. ಚಿಕ್ಕಹೆಸರೂರು ಬಳಿ ಚಾಲಕ ಶ್ರೀನಿವಾಸ್ಗೆ ಹೃದಯಾಘಾತವಾಗಿದ್ದರಿಂದ ಈ ಅವಘಡ ನಡೆದಿದೆ. ಘಟನೆ ಬಗ್ಗೆ ಪೊಲೀಸರು ಬಸ್ ನಿರ್ವಾಹಕ ಗೋವಿಂದ್ ಅವರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಅವರಿಗೆ ಗಂಡೆದೆ ಇದೆ – ಆರ್.ಅಶೋಕ್