Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್

Public TV
Last updated: July 21, 2025 5:15 pm
Public TV
Share
3 Min Read
High Court Of Jammu Kashmir And Ladakh
SHARE

ಶ್ರೀನಗರ: ಭಾರೀ ಸರಕು ವಾಹನ (Heavy Goods Vehicle) ಮತ್ತು ಪ್ರಯಾಣಿಕ ವಾಹನ ಎರಡನ್ನೂ 1994ರ ಕಾಯಿದೆಗೆ ತಿದ್ದುಪಡಿ ತಂದು ಸಾರಿಗೆ ವಾಹನ ಎಂಬ ಏಕೀಕೃತ ವರ್ಗದ ಅಡಿಯಲ್ಲಿ ತಂದಿರುವ ಹಿನ್ನೆಲೆಯಲ್ಲಿ ಭಾರೀ ಸರಕು ವಾಹನ ಚಲಾಯಿಸಲು ಪರವಾನಗಿ ಹೊಂದಿರುವ ಚಾಲಕ ಪ್ರಯಾಣಿಕ ಸೇವಾ ವಾಹನ (Passenger Service Vehicle) ಚಲಾಯಿಸಲು ಕಾನೂನುಬದ್ಧವಾಗಿ ಸಮರ್ಥರು ಎಂದು ಜಮ್ಮು, ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ (High Court of Jammu and Kashmir and Ladakh) ತೀರ್ಪು ನೀಡಿದೆ.

ಮೋಟಾರು ವಾಹನ ಕಾಯಿದೆಯ ಸೆಕ್ಷನ್ 10(2)(ಇ) ಅಡಿಯ ವರ್ಗೀಕರಣದ ಪ್ರಕಾರ ಎಲ್ಲಾ ರೀತಿಯ ವಾಣಿಜ್ಯ ವಾಹನಗಳಿಗೆ ಪ್ರತ್ಯೇಕ ಪರವಾನಗಿ ನೀಡುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಮೊಹಮ್ಮದ್ ಯೂಸುಫ್ ವಾನಿ ತಿಳಿಸಿದರು. ಶಾಸಕಾಂಗವು 1994ರಲ್ಲಿ ತಿದ್ದುಪಡಿಯ ಮೂಲಕ ಉಪ-ವರ್ಗೀಕರಣ ತೆಗೆದುಹಾಕಿದ್ದು, ಭಾರೀ ಸರಕು ಮತ್ತು ಪ್ರಯಾಣಿಕ ವರ್ಗಗಳೆರಡಕ್ಕೂ ಸಾರಿಗೆ ವಾಹನದ ಪರವಾನಗಿ ಸಾಕಾಗುತ್ತದೆ ಎಂದು ಆದೇಶಿಸಿದೆ ಎಂಬುದಾಗಿ ನ್ಯಾಯಾಲಯ ಹೇಳಿತು. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

ಚಾಲನಾ ಪರವಾನಗಿ ಹೊಂದಿರುವ ಯಾವುದೇ ವ್ಯಕ್ತಿ ನಿರ್ದಿಷ್ಟ ರೀತಿಯ ವಾಣಿಜ್ಯ ವಾಹನವನ್ನು ಓಡಿಸಲು ಅಧಿಕಾರ ಪಡೆದರೆ, ಅಂತಹವರು ಯಾವುದೇ ರೀತಿಯ ವಾಣಿಜ್ಯ ವಾಹನ ಓಡಿಸಲು ಸ್ವಯಂಚಾಲಿತವಾಗಿ ಅರ್ಹರಾಗಿರುತ್ತಾರೆ. ಅಂದರೆ, ಭಾರೀ ಸರಕು ವಾಹನ ಓಡಿಸಲು ಚಾಲನಾ ಪರವಾನಗಿ ಹೊಂದಿರುವ ಚಾಲಕ ಪ್ರಯಾಣಿಕರನ್ನು ಸಾಗಿಸುವ ವಾಹನ ಓಡಿಸಲು ಸಮರ್ಥ ಎಂದು ಹೈಕೋರ್ಟ್ ಹೇಳಿದೆ. ಇದನ್ನೂ ಓದಿ: ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ

ಫೆಬ್ರವರಿ 6, 2014ರಂದು ಮೋಟಾರ್ ಅಪಘಾತ ಹಕ್ಕುಗಳ ನ್ಯಾಯಮಂಡಳಿ (ಎಂಎಸಿಟಿ) ನೀಡಿದ್ದ ತೀರ್ಪನ್ನು ಪ್ರಶ್ನಿಸಿ ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

ನಿಯಮ ಉಲ್ಲಂಘಿಸಿದ ಚಾಲಕ ಸುಭಾಷ್ ಚಂದರ್ ‘ಭಾರೀ ಸರಕು ವಾಹನ’ ಮಾತ್ರ ಓಡಿಸಲು ಪರವಾನಗಿಯನ್ನು ಹೊಂದಿದ್ದು, ಪ್ರಯಾಣಿಕ ವಾಹನವನ್ನು ಓಡಿಸಲು ಅಗತ್ಯವಿರುವ ಪ್ರಯಾಣಿಕ ಸೇವಾ ವಾಹನ (ಪಿಎಸ್‌ವಿ) ಪರವಾನಗಿ ಹೊಂದಿಲ್ಲ ಎಂಬ ಕಾರಣಕ್ಕೆ ವಿಮಾದಾರರು ಮಂಡಳಿಯ ತೀರ್ಪು ಪ್ರಶ್ನಿಸಿದ್ದರು. ಅಲ್ಲದೇ ವಿಮಾ ಕಂಪನಿಯು 7.5% ಬಡ್ಡಿದರವು ಅತಿಯಾದದ್ದು ಎಂದು ಕೂಡ ವಾದಿಸಿತ್ತು. ಇದನ್ನೂ ಓದಿ: 2 ತಿಂಗಳಲ್ಲಿ ಮತ್ತೆ ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ತಾರೆ: ಯತ್ನಾಳ್

ಆದರೆ ಕಾಯಿದೆಗೆ ತಿದ್ದುಪಡಿ ತಂದ ನಂತರ ಸಾರಿಗೆ ವರ್ಗದ ಅಡಿಯಲ್ಲಿ ನೀಡಲಾದ ಪರವಾನಗಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುವ ವಾಣಿಜ್ಯ ವಾಹನಗಳನ್ನು ಓಡಿಸಲು ಪರವಾನಗಿದಾರರಿಗೆ ಅಧಿಕಾರ ನೀಡುತ್ತದೆ ಎಂದು ಪೀಠ ಹೇಳಿದೆ. ಜೊತೆಗೆ ಬಶೀರ್ ಅಹ್ಮದ್ ಚೋಪನ್ ಪ್ರಕರಣದ ಮೇಲಿನ ಮೇಲ್ಮನವಿದಾರರ ಅವಲಂಬನೆಯನ್ನು ಹೈಕೋರ್ಟ್ ತಿರಸ್ಕರಿಸಿತು. ಇದನ್ನೂ ಓದಿ: ಜು.23, 24 ರಂದು ಹಾಲು, ಸಿಗರೇಟ್ ಮಾರಾಟ ಬಂದ್

ಅತಿಯಾದ ಬಡ್ಡಿಯ ಕುರಿತಂತೆ ಕಂಪೆನಿಯ ವಾದ ಒಪ್ಪದ ನ್ಯಾಯಾಲಯ, ನಿರ್ದಿಷ್ಟ ಸಂದರ್ಭದಲ್ಲಿ ಎಂಎಸಿಟಿ ವಾರ್ಷಿಕ 7.5% ಬಡ್ಡಿ ವಿಧಿಸಿರುವುದು ಅಸಮಂಜಸ ಅಥವಾ ಅನಿಯಂತ್ರಿತವೆಂದು ತೋರುತ್ತಿಲ್ಲ ಎಂದಿತು. ಅದರಂತೆ, ಮೇಲ್ಮನವಿಯಲ್ಲಿ ಹುರುಳಿಲ್ಲ ಎಂದು ಪರಿಗಣಿಸಿದ ಅದು ಅರ್ಜಿ ವಜಾಗೊಳಿಸಿತು. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

ಮಾರ್ಚ್ 26, 2014ರಂದು ನೀಡಿದ ಮಧ್ಯಂತರ ಆದೇಶದ ಪ್ರಕಾರ ವಿಮಾ ಕಂಪನಿ ಈಗಾಗಲೇ ಠೇವಣಿ ಇಟ್ಟಿರುವ ಪರಿಹಾರದ ಮೊತ್ತವನ್ನು ಎಂಎಸಿಟಿ ನೀಡಿರುವ ತೀರ್ಪಿನಂತೆ ಹಕ್ಕುದಾರರಿಗೆ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ಆದೇಶಿಸಿತು. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

TAGGED:Heavy Goods VehicleHigh Court of Jammu and Kashmir and LadakhPassenger Service Vehicleಜಮ್ಮು ಕಾಶ್ಮೀರಭಾರೀ ವಾಹನಲೈಸನ್ಸ್
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
58 minutes ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
58 minutes ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
1 hour ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
2 hours ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
2 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?