– ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು
ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ(Sabarimala Ayyappa Temple) ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ(Kerala) ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್ಗೆ ತೆರಳಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ನ 33 ಜಡ್ಜ್ ಪೈಕಿ 21 ಮಂದಿಯ ಆಸ್ತಿ ಬಹಿರಂಗ
ಪಂಪಾ ಬೇಸ್ ಕ್ಯಾಂಪ್ನಿಂದ ದೇವಾಲಯಕ್ಕೆ ತೆರಳುವ ಪ್ರಯಾಣ ವಿಧಾನದ ಕುರಿತು ಅಂತಿಮ ನಿರ್ಧಾರವನ್ನು ಭದ್ರತಾ ವ್ಯವಸ್ಥೆಯ ವಿಶೇಷ ರಕ್ಷಣಾ ಗುಂಪು ತೆಗೆದುಕೊಳ್ಳಲಿದೆ. ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು ಇದೇ ಮೊದಲು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್
ರಾಷ್ಟ್ರಪತಿ ಅವರ ಭೇಟಿಯ ಬಗ್ಗೆ ಕೆಲವು ವಾರಗಳಿಂದ ಗಾಳಿ ಸುದ್ದಿ ಹರಿದಾಡುತ್ತಿದ್ದವು. ಅಧಿಕೃತ ಮಾಹಿತಿ ಬಂದ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಅವರು ಸಭೆಯನ್ನು ಕರೆಯಲಿದ್ದಾರೆ. ಅಲ್ಲದೇ ನಾವು ದೇವಾಲಯಕ್ಕೆ ತೆರಳುವ ರಸ್ತೆಯ ತುರ್ತು ದುರಸ್ತಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ ಎಂದು ರಾಷ್ಟ್ರಪತಿ ಭೇಟಿಯ ಕುರಿತು ಬಹಿರಂಗಪಡಿಸಿದರು.