ಹೈದರಾಬಾದ್ ನ ಮಾದಾಪುರ ಪೊಲೀಸರು ನಡೆಸಿದ್ದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಹಲವರ ಬಂಧನವಾಗಿತ್ತು. ಇದರಲ್ಲಿ ಬೆಂಗಳೂರಿನ ಮೂವರು ವ್ಯಕ್ತಿಗಳೂ ಇದ್ದರು. ಈ ಪ್ರಕರಣದಲ್ಲಿ ನಟ ನವದೀಪ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ನವದೀಪ್ ಗೆ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಆಧರಿಸಿದ ಇದೀಗ ಜಾರಿ ನಿರ್ದೇಶನಾಲಯ (ED) ಕೂಡ ಅಕ್ಟೋಬರ್ 10ರಂದು ವಿಚಾರಣೆಗೆ ಬರುವಂತೆ ಸೂಚಿಸಿದೆ.
ಈ ಹಿಂದೆ ನವದೀಪ್ ಅವರನ್ನು ಬಂಧಿಸಲು ತೆಲಂಗಾಣ ಪೊಲೀಸರು ಸಿದ್ಧತೆ ನಡೆಸಿದ್ದರು. ಮಾದಾಪುರ (Madapur) ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿದ್ದ ಇವರ ಬಂಧನಕ್ಕೆ (Arrest) ಅಧಿಕಾರಿಗಳು ಬಲೆ ಬೀಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್ ತಲೆಮರೆಸಿಕೊಂಡಿದ್ದರು. ಜೊತೆಗೆ ತೆಲಂಗಾಣ ಹೈಕೋರ್ಟಿಗೆ (High Court) ನಿರೀಕ್ಷಣಾ ಜಾಮೀನಿಗೆ ಅರ್ಜಿ ಕೂಡ ಸಲ್ಲಿದ್ದರು.
ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಮಾನ್ಯ ತೆಲಂಗಾಣ ಉಚ್ಛ ನ್ಯಾಯಾಲಯವು ಬಲವಂತವಾಗಿ ನವದೀಪ್ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದೆ. ಜೊತೆಗೆ ಅವರನ್ನು ವಿಚಾರಣೆಗೆ ಕರೆಯಬಹುದು ಮತ್ತು ಪರೀಕ್ಷೆಗೂ ಒಳಪಡಿಸಬಹುದು. ಆದರೆ, ಈ ನೆಪದಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದೆ.
ಮೊನ್ನೆಯಷ್ಟೇ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ (Drugs) ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ನವದೀಪ್ ಕೂಡ ಇದ್ದಾರೆ ಎಂದು ಹೇಳಲಾಗಿತ್ತು.
ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]