ಮದ್ಯದ ನಶೆಯಲ್ಲಿಯೇ ಸಾರಾಯಿ ಬಂದ್ ಮಾಡ್ಬೇಕೆಂದು ಪಂಚಾಯ್ತಿ ಕಟ್ಟಡವೇರಿದ!

Public TV
1 Min Read
BGK DRUNK MAN 3

ಬಾಗಲಕೋಟೆ: ಸಾರಾಯಿ ಬಂದ್ ಮಾಡಬೇಕೆಂದು ವ್ಯಕ್ತಿಯೊಬ್ಬ ಪಂಚಾಯ್ತಿ ಕಟ್ಟಡ ಏರಿ ಹೈಡ್ರಾಮಾ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

BGK DRUNK MAN 2

ಕಾಕಪ್ಪ ಮಾದರ ಹೈಡ್ರಾಮಾ ಮಾಡಿದ ವ್ಯಕ್ತಿ. ಈತ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಾಕನೂರು ಗ್ರಾಮ ಪಂಚಾಯ್ತಿ ಏರಿ ಕುಳಿತು, ಸಾರಾಯಿ ಬಂದ್ ಮಾಡಿಸದಿದ್ದರೆ ಪಂಚಾಯ್ತಿಯಲ್ಲೇ ನೇಣು ಹಾಕಿಕೊಂಡು ಸಾಯ್ತೀನಿ ಎಂದು ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಲ್ಲಿ-ಎಷ್ಟು ಮಳೆಯಾಗಿದೆ?

BGK DRUNK MAN 1

ನಾ ಮನೆ ಕೇಳಿಲ್ಲ, ಹೊಲ ಕೇಳಿಲ್ಲ. ಸಾರಾಯಿ ಮಾರಾಟ ಬಂದ್ ಮಾಡಿಸಿ. ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ಬಂದ್ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾನೆ. ಸ್ವತಃ ಸಾರಾಯಿ ಕುಡಿದು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಪಂಚಾಯ್ತಿ ಕಟ್ಟಡವೇರಿ ಕಾಕಪ್ಪ ಕೂತಿದ್ದಾನೆ. ನಂತರ ಗ್ರಾಮದ ಹಿರಿಯರು ಪಂಚಾಯ್ತಿ ಮೇಲೇರಿ ಮನವೊಲಿಕೆ ಮಾಡಿ ಆತನನ್ನು ಕೆಳಗಿಳಿಸಿದ್ದಾರೆ.

BGK DRUNK MAN

ವ್ಯಕ್ತಿಯ ಈ ಹೈಡ್ರಾಮಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *