ಸಾಂದರ್ಭಿಕ ಚಿತ್ರ
ಬೆಂಗಳೂರು: ಕಂಠ ಪೂರ್ತಿ ಕುಡಿದು ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ನಶೆಯಲ್ಲಿ ಹಾವು ಹಿಡಿಯಲು ಹೋಗಿ ಆಸ್ಪತ್ರೆ ಪಾಲಾದ ಘಟನೆ ನೆಲಮಂಗಲ ಪಟ್ಟಣದ ವಿಶ್ವೇಶ್ವರಪುರದಲ್ಲಿ ನಡೆದಿದೆ.
- Advertisement 2
ವಿಶ್ವೇಶ್ವರಪುರದ ನಿವಾಸಿ ಗೋವಿಂದರಾಜು(35) ಹಾವಿನಿಂದ ಕಚ್ಚಿಸಿಕೊಂಡಿದ್ದಾನೆ. ಪೇಂಟರ್ ಕೆಲಸ ಮಾಡುತ್ತಿದ್ದ ಗೋವಿಂದರಾಜು ಸೋಮವಾರ ರಾತ್ರಿ ಕುಡಿದು ಮನೆಗೆ ಬಂದಿದ್ದನು. ಈ ವೇಳೆ ಮನೆಗೆ ನುಗ್ಗಿದ್ದ ನಾಗರ ಹಾವನ್ನು ಹಿಡಿಯಲು ಮುಂದಾಗಿದ್ದಾನೆ. ಮೊದಲೇ ಕುಡಿದ ನಶೆಯಲ್ಲಿದ್ದ ಗೋವಿಂದರಾಜು ಹಾವನ್ನು ಹಿಡಿಯಲು ಹೋಗಿ ಅದರಿಂದ ಕಚ್ಚಿಸಿಕೊಂಡಿದ್ದಾನೆ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement 3
- Advertisement 4
ಗೋವಿಂದರಾಜು ಮನೆಯ ಬೀರಿನ ಹಿಂದೆ ನಾಗರ ಹಾವೊಂದು ಅವಿತುಕೊಂಡಿತ್ತು. ಕುಡಿದು ಮನೆಗೆ ಬಂದಾಗ ಅವಿತಿದ್ದ ಹಾವನ್ನು ಹಿಡಿಯವ ಸಾಹಸಕ್ಕೆ ಗೋವಿಂದರಾಜು ಕೈಹಾಕಿ, ಕೈಬೆರಳಿಗೆ ಹಾವಿನಿಂದ ಕಚ್ಚಿಸಿಕೊಂಡಿದ್ದಾನೆ. ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನೆಲಮಂಗಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.