ಕೊಪ್ಪಳ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿ ಹಾಗೂ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಕಕ್ಕರಗೊಳು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ 40 ವರ್ಷದ ಹೊನ್ನುರಪ್ಪ ಕಟಿಗೇರ ಈ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಆರೋಪಿ ನಾಲ್ವರು ಮಕ್ಕಳು ಮತ್ತು ತಾಯಿ ಮೇಲೆ ಹಲ್ಲೆ ನಡೆಸಿದ್ದು, 10 ವರ್ಷದ ಮಗಳು ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಉಳಿದ ಮೂವರು ಮಕ್ಕಳು ಹಾಗೂ ತಾಯಿಯ ಸ್ಥಿತಿ ಚಿಂತಾಜನಕವಾಗಿದೆ.
60 ವರ್ಷದ ತಾಯಿ ಈರಮ್ಮ, ಮಕ್ಕಳಾದ 7 ವರ್ಷದ ತ್ರಿವೇಣಿ, 5 ವರ್ಷದ ಈರಣ್ಣ ಹಾಗೂ 3 ವರ್ಷದ ಸಿದ್ದಪ್ಪ ಸ್ಥಿತಿ ಚಿಂತಾಜನಕವಾಗಿದ್ದು, ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನದ ಹಿಂದೆ ಹೆಂಡತಿ ವಿಶಾಲಾಕ್ಷಿಯನ್ನು ಹೊಡೆದು ತವರಿಗೆ ಓಡಿಸಿದ್ದ ಆರೋಪಿ ಇದೀಗ ಈ ಕೃತ್ಯ ಎಸಗಿದ್ದಾನೆ.
ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.