ಬೆಂಗಳೂರು: ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣ ಸಂಬಂಧ ಮೊದಲ ಪತ್ನಿ ನಾಗರತ್ನ ಇಲ್ಲಿವರೆಗೂ ಪತ್ತೆಯಾಗಿಲ್ಲ. ಇವತ್ತಿಗೆ ಎರಡು ದಿನವಾದರೂ ನಾಗರತ್ನ ಪತ್ತೆಯಾಗದೇ ಇರೋದು ಗಿರಿನಗರ ಪೊಲೀಸರಿಗೆ ತಲೆನೋವಾಗಿದೆ.
ನಾಗರತ್ನ ಎಲ್ಲಿದ್ದಾರೆ ಅಂತಾ ಪತ್ತೆಯಾದರೆ ಯಾವುದೇ ಕ್ಷಣದಲ್ಲೀ ಬಂಧಿಸುವ ಸಾಧ್ಯತೆಗಳಿವೆ. ನಾಗರತ್ನ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದ್ದು, ಬಳಿಕ ನಾಗರತ್ನ ಪತ್ತೆಯಾಗುವ ಮುನ್ಸೂಚನೆಗಳು ಹೆಚ್ಚಿವೆ.
ಇತ್ತ ಸೋಮವಾರ ದುನಿಯಾ ವಿಜಯ್ ತಮ್ಮ ಮೊದಲ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆಯೂ ಗಲಾಟೆ ನಡೆದ ವೇಳೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ ವಿಜಯ್, ಬಳಿಕ ಸಂಧಾನ ನಡೆದ ಪರಿಣಾಮ ಪತ್ನಿ ನಾಗರತ್ನ ಅವರಿಗೆ ನೀಡಬೇಕಾದ ಆಸ್ತಿಯನ್ನು ನೀಡಿದ್ದರು. ಅಲ್ಲದೇ ತಮ್ಮ ಮಕ್ಕಳ ಹೆಸರಿನಲ್ಲೂ ಆಸ್ತಿಯನ್ನು ನೀಡಿದ್ದರು.
ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಘಟನೆಗಳಿಂದ ಬೇಸತ್ತಿರುವ ವಿಜಯ್ ಅವರು ಸದ್ಯ ಕಾನೂನಿನ ಮೂಲಕ ಅಧಿಕೃತವಾಗಿ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಪತ್ನಿಯಿಂದ ವಿಚ್ಛೇದನ ಪಡೆಯಲು ಕಾರಣವನ್ನು ನೀಡಬೇಕಾಗುತ್ತದೆ. ಇದಕ್ಕೆ ಪತ್ನಿ ನಾಗರತ್ನ ಅವರ ಕೌರ್ಯ ಕಾರಣ ನೀಡಿದ್ದಾರೆ.
ಕೀರ್ತಿ ಗೌಡ ಅವರ ಮೇಲಿನ ಹಲ್ಲೆ ವಿಡಿಯೋ ಬಿಡುಗಡೆಯಾಗುತ್ತಿದಂತೆ ನಾಗರತ್ನ ಅವರು ನಾಪತ್ತೆಯಾಗಿದ್ದಾರೆ. ಕೀರ್ತಿ ಅವರ ಹಲ್ಲೆ ವಿರುದ್ಧ ಸದ್ಯ ನಾಗರತ್ನ ಅವರ ಮೇಲೆ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ನಡುವೆ ಕೀರ್ತಿ ತಮ್ಮ ದೂರಿನಲ್ಲಿ ವಿಜಯ್ ಅವರ ಪುತ್ರಿಯರ ಮೇಲಿನ ಹೆಸರನ್ನು ಹಿಂಪಡೆದ ಹಿನ್ನೆಲೆಯಲ್ಲಿ ಪೊಲೀಸರು ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv