Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

Cinema

ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

Public TV
Last updated: April 12, 2024 10:30 am
Public TV
Share
3 Min Read
duniya vijay 1 1
SHARE

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ (Satya Prakash) ಅವರು ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ  (Jadesh Hampi)ನಿರ್ದೇಶನದ ಹಾಗೂ ದುನಿಯಾ ವಿಜಯ್ (Duniya Vijay) ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶಾಸಕ ಶ್ರೀ ಗೋಪಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

Duniya vijay 3 1

ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ.  ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ.   ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ರಿತನ್ಯ ಎಂದು ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

Duniya vijay 1 3

ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್  ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ  ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್,  ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಾಯಕ ದುನಿಯಾ ವಿಜಯ್.

Duniya vijay 2 2

ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ ಎಂದರು ರಿತನ್ಯ(ಮೋನಿಕಾ). “ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.

ಸಹ ನಿರ್ಮಾಪಕ ಸೂರಜ್ ಗೌಡ, ನಟ ಶಿಶಿರ, ಛಾಯಾಗ್ರಾಹಕ ಸ್ವಾಮಿ ಗೌಡ, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ನೂತನ ಚಿತ್ರದ ಕುರಿತು ಮಾತನಾಡಿದರು. “ಭೀಮ” ಚಿತ್ರದ ನಿರ್ಮಾಪಕರ ಕೃಷ್ಣ ಸಾರ್ಥಕ್ ಶುಭ ಹಾರೈಸಿದರು.

TAGGED:Duniya VijayJadesh HampiMuhurtaSatya Prakashಜಡೇಶ್ ಹಂಪಿದುನಿಯಾ ವಿಜಯ್ಮುಹೂರ್ತಸತ್ಯ ಪ್ರಕಾಶ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mohammed Shami Rishabh Pant
Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
By Public TV
3 minutes ago
Sharanya
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಮೂರು ದಿನಗಳ ಬಳಿಕ ಪತ್ತೆ

Public TV
By Public TV
4 minutes ago
British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
29 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
44 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
1 hour ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?