Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

Cinema

ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

Public TV
Last updated: April 12, 2024 10:30 am
Public TV
Share
3 Min Read
duniya vijay 1 1
SHARE

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ (Satya Prakash) ಅವರು ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ  (Jadesh Hampi)ನಿರ್ದೇಶನದ ಹಾಗೂ ದುನಿಯಾ ವಿಜಯ್ (Duniya Vijay) ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶಾಸಕ ಶ್ರೀ ಗೋಪಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

Duniya vijay 3 1

ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ.  ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ.   ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ರಿತನ್ಯ ಎಂದು ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

Duniya vijay 1 3

ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್  ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ  ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್,  ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಾಯಕ ದುನಿಯಾ ವಿಜಯ್.

Duniya vijay 2 2

ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ ಎಂದರು ರಿತನ್ಯ(ಮೋನಿಕಾ). “ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.

ಸಹ ನಿರ್ಮಾಪಕ ಸೂರಜ್ ಗೌಡ, ನಟ ಶಿಶಿರ, ಛಾಯಾಗ್ರಾಹಕ ಸ್ವಾಮಿ ಗೌಡ, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ನೂತನ ಚಿತ್ರದ ಕುರಿತು ಮಾತನಾಡಿದರು. “ಭೀಮ” ಚಿತ್ರದ ನಿರ್ಮಾಪಕರ ಕೃಷ್ಣ ಸಾರ್ಥಕ್ ಶುಭ ಹಾರೈಸಿದರು.

TAGGED:Duniya VijayJadesh HampiMuhurtaSatya Prakashಜಡೇಶ್ ಹಂಪಿದುನಿಯಾ ವಿಜಯ್ಮುಹೂರ್ತಸತ್ಯ ಪ್ರಕಾಶ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 minute ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
19 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
20 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
37 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
37 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?