ಧಾರವಾಡ: ಗಣೇಶ ಮೆರವಣಿಗೆ ವೇಳೆ ಜನರ ಹುಚ್ಚಾಟವನ್ನು ತಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಪರಿಣಾಮ ಪೊಲೀಸರು ಲಘು ಲಾಠಿಚಾರ್ಜ್ ಮಾಡಿರುವ ಘಟನೆ ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಗ್ರಾಮದ ಎರಡು ಓಣಿಯವರು ಗಣೇಶ ವಿಸರ್ಜನೆಯನ್ನು ಏಕಕಾಲಕ್ಕೆ ಆರಂಭ ಮಾಡಿದ್ದರು. ಈ ಮೆರವಣಿಗೆ ವೇಳೆ ಎರಡೂ ಓಣಿಯವರು ಎದುರು ಬದುರು ಡಿಜೆ ಹಾಕಿ ಹುಚ್ಚೆದು ಕುಣಿಯಲು ಆರಂಭಿಸಿದ್ದರು. ಆಗ ಪೊಲೀಸರು ಎರಡು ಡಿಜೆಯನ್ನು ಬೇರೆ ಬೇರೆ ಕಡೆ ತಿರುಗಿಸಲು ಯತ್ನಿಸಿದ್ದರು. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪನದಿಗೆ ಬಿದ್ದ ಕಾರು – ನಾಲ್ವರು ಪಾರು
ಇದರಿಂದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಬಳಿಕ ಪೊಲೀಸರು ಡಿಜೆ ಬಂದ್ ಮಾಡಿಸಿ, ಶಾಂತಿಯುತವಾಗಿ ಗಣೇಶನ ವಿಸರ್ಜನೆ ಮಾಡಿಸಿದರು.