Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

Latest

ಸೂಲಿಬೆಲೆ, ಡಿವಿಎಸ್ ಟ್ವೀಟ್ ವಾರ್ ರಿಪೋರ್ಟ್ ಪಡೆದ ಅಮಿತ್ ಶಾ

Public TV
Last updated: October 3, 2019 6:45 pm
Public TV
Share
3 Min Read
Amit shah DVS
SHARE

– ಕೇಂದ್ರ ಸಚಿವರಿಗೆ ಶಾ ಕ್ಲಾಸ್

ನವದೆಹಲಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ನಡುವಿನ ವಾಕ್ ಸಮರ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಲಿಬೆಲೆ ಹಾಗೂ ಸದಾನಂದಗೌಡ ಅವರ ಟ್ವಿಟ್ಟರ್ ವಾರ್‍ನ ಸಂಪೂರ್ಣ ರಿಪೋರ್ಟ್ ಅನ್ನು ತರಿಸಿಕೊಂಡಿದ್ದಾರೆ. ಕನ್ನಡದಲ್ಲಿರುವ ಟ್ವೀಟ್‍ಗಳನ್ನು ಭಾಷಾಂತರ ಮಾಡಿಸಿ ಪ್ರತಿ ಪದದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮೋದಿ ಹೆಸರೇಳದಿದ್ದರೆ ಅವರ ಭಾಷಣ ಕೇಳಲು ಯಾರು ಬರುತ್ತಾರೆ – ಸೂಲಿಬೆಲೆಗೆ ಸಿಂಹ ಟಾಂಗ್

amith shah

ಹಿರಿಯರಾಗಿ ಒಂದು ವಿಚಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ. ಇದಕ್ಕೆ ಯಾರು ಹೊಣೆ ಎಂದು ಅಮಿತ್ ಶಾ, ಸದಾನಂದಗೌಡ ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಆಗಿದ್ದೇನು?:
ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ದೀರ್ಘಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

SULIBELE SADANANDA GOWDA 1

ಇದನ್ನು ರಿಟ್ವೀಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ, ಲಾಲ್! ಇವರು ಈಗ ಬಂದರು.. ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾಷ್ಟ್ರ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೆ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಡಿ.ವಿ ಸದಾನಂದಗೌಡರನ್ನು ಪ್ರಶ್ನಿಸಿದ್ದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಅಸಮಾಧಾನ ಹೊರ ಹಾಕಿದ್ದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

chakrvarthi

ಪರಸ್ಪರ ವಾಕ್ ಹಾಗೂ ಟ್ವೀಟ್ ಸಮರದ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದರು. ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್ ಯೂ) ಎಂದು ಬರೆದುಕೊಂಡಿದ್ದರು. ಕೇಂದ್ರ ಸಚಿವರ ನಡೆಯ ಬಗ್ಗೆ ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

DVS Tweet

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವರು, ನಾನು ಯಾಕೆ ಬ್ಲಾಕ್ ಮಾಡಬೇಕು? ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಆದರೆ ಅದಕ್ಕೊಂದು ಮಾರ್ಗವಿದೆ. ಬುಧವಾರ 3-4 ಗಂಟೆ ಟ್ವಿಟ್ಟರ್ ಸ್ಥಗಿತಗೊಂಡಿತ್ತು. ಈ ವೇಳೆ ಬ್ಲಾಕ್ ಆಗಿರಬಹುದು ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಡಿವಿಎಸ್ ಹೇಳಿಕೆಯ ಬೆನ್ನಲ್ಲೇ ಸೂಲಿಬೆಲೆ ಅಭಿಮಾನಿಗಳು ಸದಾನಂದಗೌಡರೇ, ಸಂಸದರನ್ನು ಪ್ರಶ್ನಿಸುವುದು ದೇಶದ್ರೋಹವಾದರೇ ನಾನು ದೇಶದ್ರೋಹಿಯೇ ಎಂದು ಬರೆದು #StopUrArroganceDVS #IamWithChakravarthySulibele #NotFairModiji  ಬಳಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

IM with @astitvam @DVSadanandGowda#NotFairModiji#StopUrArroganceDVS#IamWithChakravarthySulibele pic.twitter.com/s0M2vWmB7p

— VivekRamakrishna (@v_karnaa) October 3, 2019

TAGGED:Amit Shahchakravarthy sulibeleDV Sadananda GowdaPresident of BJPPublic TVTweet warಅಮಿತ್ ಶಾಚಕ್ರವರ್ತಿ ಸೂಲಿಬೆಲೆಟ್ವಿಟ್ಟರ್ಡಿ.ವಿ.ಸದಾನಂದಗೌಡಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

BJP Worker
Crime

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

Public TV
By Public TV
26 minutes ago
Shivamogga
Crime

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್‌!

Public TV
By Public TV
1 hour ago
Karwar Pavan Bhat
Crime

ಮದುವೆಗೆ ಒಪ್ಪದ ಯುವತಿ – ಪುರೋಹಿತ ಆತ್ಮಹತ್ಯೆ

Public TV
By Public TV
1 hour ago
Mandya HDK
Districts

ಮಂಡ್ಯದಲ್ಲಿ ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ ಕಿಡಿ!

Public TV
By Public TV
2 hours ago
Delhi Demolition
Crime

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ – ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

Public TV
By Public TV
2 hours ago
Ballari Clash 1 1
Bellary

ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?