Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

Bengaluru City

ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

Public TV
Last updated: August 24, 2017 5:10 pm
Public TV
Share
2 Min Read
BSY
SHARE

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದ್ದು ಎಸಿಬಿ, ಸಿಐಡಿಗಳ ದುರ್ಬಳಕೆಗೆ ಸಾಕ್ಷಿಗಳು ಸಿಕ್ಕಿವೆ. ಗಣಪತಿ ಸಾವಿನ ಕೇಸ್‍ನಲ್ಲಿ ಸಿಐಡಿ ತನಿಖೆ ಸರಿಯಾಗಿ ಆಗಿಲ್ಲ. ಪೋನ್ ಕಾಲ್‍ಗಳು, ಮೆಸೇಜ್‍ಗಳು, ಡಾಕ್ಯೂಮೆಂಟ್‍ಗಳು,ಫೋಟೋಗಳು ನಾಪತ್ತೆಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಕ್ಷ್ಯ ನಾಶಪಡಿಸುವಲ್ಲಿ ಗೃಹ ಸಚಿವಾಲಯದ ಸಲಹೆಗಾರ ಕೆಂಪಯ್ಯ ಪಾತ್ರ ಇದೆ. ಅಷ್ಟೇ ಅಲ್ಲ ಆಡಳಿತ ಪಕ್ಷದ ಕೆಲ ನಾಯಕರ ಕೈವಾಡ ಸಹ ಇದೆ. ಜಾರ್ಜ್ ರಾಜೀನಾಮೆ ನೀಡಿದ್ರೂ ಮತ್ತೆ ತರಾತುರಿಯಲ್ಲಿ ಸಂಪುಟಕ್ಕೆ ಸೇರಿಕೊಂಡಿದ್ದಾರೆ. ಈ ಸಾಕ್ಷಿ ನಾಶದ ಹಿಂದೆ ಆಡಳಿತ ಪಕ್ಷದ ಮುಖಂಡರ ಪ್ರಭಾವ ಇದೆ ಎಂದು ಬಿಎಸ್‍ವೈ ಅವರು ಆರೋಪಿಸಿದರು.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಾಟಕೀಯ. ತನಿಖೆಯನ್ನು ಸಿಐಡಿ ಸರ್ಕಾರದ ಇಚ್ಛೆಗೆ ತಕ್ಕಂತೆ ನಡೆಸಿದೆ. ವಿಧಿವಿಜ್ಞಾನ ಪ್ರಯೋಗಾಲಯ ಮೂಲಕ ಈ ಸತ್ಯ ಬಹಿರಂಗವಾಗಿದೆ. ಪ್ರಕರಣ ಕುರಿತು ದೊರೆತಿದ್ದ ಸಾಕ್ಷ್ಯಗಳು ನಾಶವಾಗಿವೆ. ಆರೋಪ ಕೇಳಿ ಬಂದ ನಾಯಕರನ್ನು ರಕ್ಷಿಸಲು ಪ್ರಮುಖ ದಾಖಲೆಗಳನ್ನು ನಾಶಮಾಡಲಾಗಿದೆ. ಈ ಸಾಕ್ಷ್ಯ ನಾಶ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಪ್ರಕರಣ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳ ಮತ್ತು ಸರ್ಕಾರದ ನಡುವೆ ಸಂಚು ನಡೆದಿದೆ. ಈ ಎಲ್ಲ ಬೆಳವಣಿಗೆಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊರಬೇಕು. ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದರು. ತನಿಖೆ ವೇಳೆ ಕೊಠಡಿಯಲ್ಲಿ ಮೂರು ಗುಂಡು ಹಾರಿಸಿದ್ದ ಬಗ್ಗೆ ಸ್ಪಷ್ಟನೆ ಇಲ್ಲ. ಪ್ರಕರಣದಲ್ಲಿ ಸರ್ಕಾರದ ಪ್ರಭಾವಿ ನಾಯಕರ ಕೈವಾಡವಿದೆ. ಸಾಕ್ಷ್ಯ ನಾಶ ಪತ್ತೆ ಹಚ್ಚಿ ನ್ಯಾಯ ಸಿಗಬೇಕು ಅನ್ನೋದು ಬಿಜೆಪಿಯ ಕೆಲಸ ಎಂದರು.

ಸಾವಿಗೂ ಮುನ್ನ ಗಣಪತಿ ಪೊಲೀಸ್ ಅಧಿಕಾರಿಗಳ ಮತ್ತು ಜಾರ್ಜ್ ಹೆಸರನ್ನು ಉಲ್ಲೇಖ ಮಾಡಿದ್ದರು. ಪ್ರಾಮಾಣಿಕ ಅಧಿಕಾರಿಗಳಿಗೆ ರಾಜ್ಯದಲ್ಲಿ ಕೆಲಸ ಮಾಡದಂತೆ ವಾತಾವರಣವಿದೆ. ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿದವರು ಯಾರು ಎಂದು ಪತ್ತೆ ಹಚ್ಚಬೇಕು. ಸಚಿವ ಸ್ಥಾನಕ್ಕೆ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು. ಸಿಎಂ ಮತ್ತು ಕೆಜೆ ಜಾರ್ಜ್ ರಾಜೀನಾಮೆ ನೀಡದೆ ಇದ್ದಲ್ಲಿ ಬಿಜೆಪಿಯಿಂದ ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಜಾರ್ಜ್ ರಾಜೀನಾಮೆ ನೀಡದೇ ಇದ್ದರೆ ಆ.26 ರಂದು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕರಣ ಕುರಿತು ಮುಂದಿನ ಕ್ರಮ ಕೈಗೊಳ್ಳುತ್ತೇವೆ.

ಈ ಪ್ರಕರಣದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಅವರ ಪುತ್ರನ ಹೆಸರು ಕೂಡ ಕೇಳಿ ಬಂದಿದೆ ಎನ್ನುವ ಪ್ರಶ್ನೆಗೆ ಸಾವಿಗೆ ಯಾರದೇ ಪಾತ್ರ ಇದ್ದರೂ ತನಿಖೆ ಪೂರ್ಣಗೊಂಡ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು.

ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಕ್ಲೀನ್ ಚಿಟ್ ವಿಚಾರದಲ್ಲಿ ನ್ಯಾ.ಕೆಂಪಣ್ಣ ಆಯೋಗದ ವರದಿಗೆ ಕಿಮ್ಮತ್ತಿಲ್ಲ. ಕೆಂಪಣ್ಣ, ಕೆಂಪಯ್ಯ ಎಲ್ಲಾ ಒಂದೇ ಅಲ್ವಾ? ತರಾತುರಿಯಲ್ಲಿ ವರದಿ ಕೊಟ್ಟಿದ್ದಾರೆ. ವರದಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಎಸ್‍ವೈ ಹೇಳಿದರು.

TAGGED:bengalurubjpbs yeddyurappaDYSP GanapatiKJ GeorgePublic TVsiddaramaiahಕೆಜೆ ಜಾರ್ಜ್ಡಿವೈಎಸ್‍ಪಿ ಗಣಪತಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
2 minutes ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
13 minutes ago
pahalgam Terror 4
Latest

20 ನಿಮಿಷಗಳಲ್ಲೇ ನರಮೇಧ ನಡೆದಿದ್ದು ಹೇಗೆ? – ಈಗಲೂ ಕಣ್ಣಿಗೆ ಕಟ್ಟಿದಂತಿದೆ ಬೀಭತ್ಸ ದೃಶ್ಯ!

Public TV
By Public TV
23 minutes ago
Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
42 minutes ago
pahalgam attack from karnataka
Latest

ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

Public TV
By Public TV
43 minutes ago
pahalgam attack
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ʻಸಿಂಧೂರ’ ಸಾಂತ್ವನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?