ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

Public TV
1 Min Read
Sri Ram Sena Pramod Muthalik 1

ಬೆಳಗಾವಿ: ಮುಸ್ಲಿಂ ವಿಸ್ತಾರವಾದ, ಪ್ರತ್ಯೇಕವಾದ ಹಿನ್ನೆಲೆ ಆರ್ಥಿಕ ಬಹಿಷ್ಕಾರ, ಮುಸ್ಲಿಮರ ಜೊತೆಗೆ ವ್ಯಾಪಾರ ವಹಿವಾಟು ಮಾಡಬಾರದು ಅನ್ನೋದು ಪ್ರಾರಂಭವಾಗಿದೆ. ಹೀಗಾಗಿ ಜಾತ್ರೆಯಲ್ಲಿ ಮುಸ್ಲಿಂ ಅಂಗಡಿಗಳು ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ವ್ಯಕ್ತಪಡಿಸಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

Sri Ram Sena Pramod Muthalik

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ ನಡೆಯುತ್ತಿರುತ್ತವೆ. ಮುಂದಿನ ದಿನಗಳಲ್ಲಿ ಮುಸ್ಲಿಂರ ಜೊತೆಗೆ ವ್ಯಾಪಾರ ವಹಿವಾಟು ನಡೆಸಬಾರದು ಅನ್ನೋ ಬಹಿಷ್ಕಾರ ಮಾಡಲಾಗುತ್ತದೆ. ಅದು ಗೋಹತ್ಯೆ, ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ ಎಂದರು. ಇದನ್ನೂ ಓದಿ: ಮಾನಸಿಕತೆ ತಿದ್ದಬೇಕಾದರೆ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಿದ್ರೆ ಮಾತ್ರ ಸಾಧ್ಯ: ಮುತಾಲಿಕ್

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ ನಡೆಯುತ್ತಿರುತ್ತವೆ. ಮುಂದಿನ ದಿನಗಳಲ್ಲಿ ಮುಸ್ಲಿಂರ ಜೊತೆಗೆ ವ್ಯಾಪಾರ ವಹಿವಾಟು ನಡೆಸಬಾರದು ಅನ್ನೋ ಬಹಿಷ್ಕಾರ ಮಾಡಲಾಗುತ್ತದೆ. ಅದು ಗೋಹತ್ಯೆ, ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ ಎಂದರು.

hijab karnataka bandh Temples in coastal Karnataka and Malnad region ban Muslim traders at annual fairs muzrai department rules 1

ಬೆಳಗ್ಗೆ ಐದು ಗಂಟೆಗೆ ಆಜಾನ್ ಕೂಗುವುದನ್ನ ನಿಲ್ಲಿಸಬೇಕು. ಇಡೀ ರಾಜ್ಯಾದ್ಯಂತ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನವಾಗಿದೆ. ಆಕ್ಷನ್‍ಗೆ ರಿಯಾಕ್ಷನ್ ನಾವು ಕೊಡುತ್ತಿದ್ದೇವೆ. ಬಹುಸಂಖ್ಯಾತ ಹಿಂದೂ ಸಮಾಜದ ಗೌರವ ಕಾಣುವ ಪ್ರಕ್ರಿಯೆ ಆಗಬೇಕು. ನಮ್ಮ ದೇವರನ್ನು ಒಪ್ಪದ ನೀವು ನಮ್ಮ ಜಾತ್ರೆಯಲ್ಲಿ ಯಾಕೆ ಬರುತ್ತೀರಿ. ಈ ದೇಶದ ಕಾನೂನು, ಸಂವಿಧಾನ, ಪೆÇಲೀಸ್ ನಿಯಮ ಪಾಲಿಸುವವರೆಗೂ ಬಹಿಷ್ಕಾರ ಮುಂದುವರೆಸುತ್ತೇವೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೆಪಿಎಸ್‍ಸಿಗೆ ಹೊಸ ರೂಪ ಕೊಡ್ತೀವಿ: ಬೊಮ್ಮಾಯಿ 

Share This Article
Leave a Comment

Leave a Reply

Your email address will not be published. Required fields are marked *