ಲೋಕಾಯುಕ್ತ ಕ್ಲೀನ್‌ ಚಿಟ್‌ ವರದಿ ತಿರಸ್ಕರಿಸುವಂತೆ ಇಡಿ ತಕರಾರು ಅರ್ಜಿ

Public TV
1 Min Read
Siddaramaiah 4

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ಲೋಕಾಯುಕ್ತ (Lokayukta) ನೀಡಿರುವ ಕ್ಲೀನ್ ಚಿಟ್‌ ರೀಪೋರ್ಟ್ ಅನ್ನು ತಿರಸ್ಕರಿಸುವಂತೆ ಜಾರಿ ನಿರ್ದೇಶನಾಲಯ (ED) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ.

ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ಆದರೂ ಲೋಕಾಯುಕ್ತದವರು ಕ್ಲೀನ್ ಚೀಟ್ ಕೊಟ್ಟಿದ್ದಾರೆ. ಇದು ಸರಿ ಇಲ್ಲ. ಹೀಗಾಗಿ ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ತಕರಾರು ಅರ್ಜಿ ಹಾಕಿದೆ.

Karnataka Lokayukta

ಮುಡಾ ಅಧಿಕಾರಿಗಳಿಂದಲೇ ಕಾನೂನು ದುರ್ಬಳಕೆ ಆರೋಪ:
ಮುಡಾ ಹಗರಣ‌ ಪ್ರಕರಣದಲ್ಲಿ ಲೋಕಾಯುಕ್ತ ವರದಿಯಿಂದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬ ಪಾರಾಗಿದ್ದಾರೆ. ಆದ್ರೆ, ಕಾನೂನಿನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ಈಗ ಸಂಕಷ್ಟ ಎದುರಿಸಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. 2003-04 ರಿಂದಲೂ ಕೂಡ ಮುಡಾದ ಆಡಳಿತ ಅಧಿಕಾರಿಗಳು ಕಾನೂನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಲೋಕಾಯುಕ್ತ (Lokayukta) ತೀರ್ಮಾನಕ್ಕೆ ಬಂದಿತ್ತು. 2016 ರಿಂದ 2024ರ ವರೆಗೂ ಮುಡಾದಲ್ಲಿ ಆಯುಕ್ತರಾಗಿದ್ದ ಅಧಿಕಾರಿಗಳು 1,098 ಸೈಟ್‌ಗಳು ದುರ್ಬಳಕೆ ಆಗಿದೆ ಎಂದು ತನಿಖೆ ಮುಂದುವರೆಸಿದೆ.

Share This Article