Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ

Public TV
Last updated: October 15, 2019 12:05 pm
Public TV
Share
4 Min Read
DK SHIVAKUMAR copy
SHARE

ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಡಿ.ಕೆ.ಶಿವಕುಮಾರ್ ತಾಯಿ ಹಾಗೂ ಪತ್ನಿಗೆ ಸಮನ್ಸ್ ನೀಡಿತ್ತು. ಆದರೆ ವಿಚಾರಣೆಗೆ ಅತ್ತೆ ಗೈರಾಗಿದ್ದು, ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಇಡಿ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿದ್ದು, ಅನಾರೋಗ್ಯದ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರ ಬರೆದಿದ್ದಾರೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಗೌರಮ್ಮಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಅನಾರೋಗ್ಯ ಹಿನ್ನೆಲೆ ದೆಹಲಿಗೆ ಆಗಮಿಸಲು ಸಾಧ್ಯವಿಲ್ಲ ಎಂದು ಗೌರಮ್ಮ ಅವರು ಸಮನ್ಸ್ ಗೆ ಉತ್ತರ ನೀಡಿದ್ದಾರೆ. ಅಲ್ಲದೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.

dkshi mother

ಡಿ.ಕೆ.ಶಿವಕುಮಾರ್ ಪತ್ನಿಯಿಂದಲೂ ಇದೇ ರೀತಿ ಮನವಿ ಮಾಡಲಾಗಿದ್ದು, ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಅಕ್ಟೋಬರ್ 17ಕ್ಕೆ ವಿಚಾರಣೆಗೆ ಹಾಜರಾಗುವಂತೆ ಉಷಾ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಇದೀಗ ಸಮನ್ಸ್ ಗೆ ಗೌರಮ್ಮ ಹಾಗೂ ಉಷಾ ಅವರು ಉತ್ತರಿಸಿದ್ದು, ಈ ಕುರಿತು ಇಡಿ ಅಧಿಕಾರಿಗಳು ಇನ್ನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರರಕಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಮತ್ತಷ್ಟು ವಿಚಾರಣೆಗೆ ನಡೆಸಿರುವ ಇಡಿ ಡಿಕೆಶಿ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಡಿಕೆ ಶಿವಕುಮಾರ್ ಅವರ ಕುಟುಂಬವನ್ನು ಬಿಟ್ಟು ಬಿಡದಂತೆ ಕಾಡುತ್ತಿರುವ ಇಡಿ ಅಧಿಕಾರಿಗಳು ನಾಳೆಯೇ ವಿಚಾರಣೆ ಹಾಜರಾಗುವಂತೆ ಸೋಮವಾರ ತಾಯಿ ಗೌರಮ್ಮ ಅವರಿಗೆ ಸೂಚಿಸಿದ್ದರು. ಉಷಾ ಅವರಿಗೆ ನೀಡಲಾಗಿರುವ ನೋಟಿಸ್‍ನಲ್ಲಿ ಗುರುವಾರ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಲು ಕುಟುಂಬ ಸದಸ್ಯರ ನಡುವೆ ನಡೆದಿರುವ ಹಣದ ವ್ಯವಹಾರವೇ ಕಾರಣ ಎನ್ನಲಾಗಿದ್ದು, ತಾಯಿ-ಮಗನಿಗೆ, ಮಗ-ತಾಯಿಗೆ, ಪತಿ-ಪತ್ನಿಗೆ, ಮಾವನಿಂದ ಸೊಸೆಗೆ ಸಾಲದ ವ್ಯವಹಾರ ನಡೆದಿರುವ ಕುರಿತು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

dk shivakumar mother gowramma 2

ಅಜ್ಜಿ-ಮೊಮ್ಮಗಳ ವ್ಯವಹಾರ: ಡಿಕೆಶಿ ಕುಟುಂಬದಲ್ಲಿ ನಡೆದಿರುವ ಹಣಕಾಸಿನ ವ್ಯವಹಾರ ಬಗ್ಗೆ ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದು, ಡಿಕೆಶಿ ತಾಯಿ ಗೌರಮ್ಮ ಅವರು ಮೊಮ್ಮಗಳ ನಡುವೆ ಕೋಟಿ ರೂ. ವ್ಯವಹಾರ ನಡೆದಿದೆ. ಮೊದಲಿಗೆ ಮೊಮ್ಮಗಳು ಐಶ್ವರ್ಯ ಅವರ ಖಾತೆಗೆ 2018 ಜೂನ್ ತಿಂಗಳಿನಲ್ಲಿ ಅಜ್ಜಿ ಗೌರಮ್ಮ ಅವರು 3 ಕೋಟಿ ರೂ.ಗಳನ್ನು ಜಮೆ ಮಾಡಿದ್ದಾರೆ. ಅಲ್ಲದೇ ಐಶ್ವರ್ಯಾ ಹೆಸರಿಗೆ 2001 ರಲ್ಲಿ ಉತ್ತರಹಳ್ಳಿಯಲ್ಲಿದ್ದ 3 ಎಕ್ರೆ ಭೂಮಿಯನ್ನು ಗಿಫ್ಟ್ ನೀಡಿ ಬರೆದುಕೊಟ್ಟಿದ್ದರು. ಆ ಬಳಿಕ 2002ರಲ್ಲಿ ಹೊಸಕೆರೆಹಳ್ಳಿಯ 3 ಎಕರೆ ಭೂಮಿಯನ್ನು ಗಿಫ್ಟ್ ನೀಡಿದ್ದರು. ಇದರ ನಡುವೆಯೇ ಐಶ್ವರ್ಯಾಗೆ ಮೂರು ನಿವೇಶನಗಳನ್ನು ಗೌರಮ್ಮ ನೀಡಿದ್ದರು. ಒಟ್ಟು 193 ಕೋಟಿ ರೂ.ಗಳನ್ನು ಐಶ್ವರ್ಯಾ ಅವರ ಖಾತೆಗೆ ಜಮೆ ಮಾಡಿದ್ದರು.

ಅಮ್ಮ-ಮಕ್ಕಳ ನಡುವಿನ ವ್ಯವಹಾರ: ಮೊಮ್ಮಗಳಿಗೆ ಭೂಮಿ ಹಾಗೂ ಹಣವನ್ನು ನೀಡಿದ್ದ ಗೌರಮ್ಮ ಅವರು ಪುತ್ರ ಡಿಕೆ ಶಿವಕುಮಾರ್ ಅವರಿಂದ ಎರಡು ಹಂತದಲ್ಲಿ 22.11 ಕೋಟಿ ರೂ. ಹಾಗೂ 15 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ ಮತ್ತೆ ಡಿಕೆಶಿ ಅವರಿಗೆ 35 ಲಕ್ಷ ರೂ. ಗಳನ್ನು ಗೌರಮ್ಮ ಸಾಲ ನೀಡಿದ್ದಾರೆ. ಅಲ್ಲದೇ ಮತ್ತೊಬ್ಬ ಪುತ್ರ ಡಿಕೆ ಸುರೇಶ್‍ರಿಂದ ಗೌರಮ್ಮ ಅವರಿಗೆ 4.89 ಕೋಟಿ ರೂ. ಸಾಲ ನೀಡಲಾಗಿದೆ.

DKSHI Daughter Aishwarya Shivakumar 2 copy

ಬೇನಾಮಿ ಆಸ್ತಿ ತನಿಖೆ: ಕುಟುಂಬದ ಸದಸ್ಯರ ನಡುವೆಯೇ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸಿದೆ. ಅಲ್ಲದೇ ಇಡಿ ಅಧಿಕಾರಿಗಳಿಗೆ ಗೌರಮ್ಮರ ಹೆಸರಲ್ಲಿ 273 ಕೋಟಿ ರೂ. ಬೇನಾಮಿ ಆಸ್ತಿ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಡಿಕೆಶಿ, ಡಿಕೆ ಸುರೇಶ್, ಗೌರಮ್ಮ ನಡುವೆ ಒಟ್ಟು 43 ಕೋ. ರೂ. ಸಾಲ ವ್ಯವಹಾರ ನಡೆದಿದೆ. 2005ರಲ್ಲಿ ಹೊಸಕೆರೆಹಳ್ಳಿಯಲ್ಲಿ 1 ಕೋಟಿ ರೂ. ಗಳಿಗೆ 4.9 ಗುಂಟೆ ಜಮೀನನ್ನು ಗೌರಮ್ಮ ಹೆಸರಲ್ಲಿ ಖರೀದಿ ಮಾಡಲಾಗಿದ್ದು, ಆದರೆ ಆದಾದ 2ನೇ ವರ್ಷದಲ್ಲಿ ಅಂದರೆ 2007ರಲ್ಲಿ ಇದೇ ಜಮೀನನ್ನು 11 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಉಳಿದಂತೆ ಗೌರಮ್ಮ ಅವರ ಹೆಸರಿನಲ್ಲಿ ಯಲಹಂಕದಲ್ಲಿ 20 ಎಕರೆ 9 ಗುಂಟೆ ಜಮೀನು, ಉತ್ತರಹಳ್ಳಿಯಲ್ಲಿ 1.7 ಗುಂಟೆ ಜಮೀನು, ಕನಕಪುರದಲ್ಲಿ 3 ಕಲ್ಲಿನ ಕ್ವಾರಿ, 23 ಗ್ರಾನೈಟ್ ಬ್ಯುಸಿನೆಸ್ ಸಂಸ್ಥೆಗಳಿಗೆ.

ಡಿಕೆಶಿ ಪತ್ನಿಗೆ ಸಮನ್ಸ್ ಯಾಕೆ?
ಮೊಮ್ಮಗಳು ಹಾಗೂ ಇಬ್ಬರ ಪುತ್ರರ ನಡುವೆ ತಾಯಿ ಗೌರಮ್ಮ ಅವರು ನಡೆಸಿರುವ ವ್ಯವಹಾರದಂತೆಯೇ ಡಿಕೆಶಿ ಪತ್ನಿ ಉಷಾ ಅವರ ಹೆಸರಿನಲ್ಲೂ ಹಣದ ವ್ಯವಹಾರ ನಡೆದಿದೆ. ಪತಿ ಡಿಕೆ ಶಿವಕುಮಾರ್ ಅವರಿಗೆ ಪತ್ನಿ ಉಷಾ ಅವರು 2.60 ಕೋಟಿ ರೂ. ಸಾಲ ನೀಡಿದ್ದಾರೆ. ಮಾವ ಕೆಂಪೇಗೌಡರಿಂದ 5.42 ಕೋಟಿ ರೂ. ಹಾಗೂ ಅತ್ತೆ ಗೌರಮ್ಮರಿಂದ 15.86 ಕೋಟಿ ಸಾಲ ಪಡೆದಿದ್ದಾರೆ.

dk shivakumar it raid 9

ಉಳಿದಂತೆ ಪುತ್ರಿ ಐಶ್ವರ್ಯಾ ಅವರಿಗೆ 2.70 ಕೋಟಿ ರೂ. ಹಾಗೂ ಪತಿಯ ಸಹೋದರ ಡಿಕೆ ಸುರೇಶ್‍ಗೆ 11 ಕೋಟಿ ಸಾಲ ನೀಡಿದ್ದಾರೆ. ಅಲ್ಲದೇ 13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಖರೀದಿಯನ್ನು ಉಷಾ ಅವರು ಮಾಡಿದ್ದು, ಶ್ರೀರಾಮ್ ಪ್ರಾಪರ್ಟೀಸ್‍ನಿಂದ ದಾಖಲೆ ಇಲ್ಲದ 5 ಕೋಟಿ ರೂ. ಹಣವನ್ನು ಸ್ವೀಕಾರ ಮಾಡಿದ್ದಾರೆ. ಶೋಭಾ ಡೆವಲಪರ್ಸ್, ಇಂದ್ರಪ್ರಸ್ತ ಡೆವಲಪರ್ಸ್ ನಲ್ಲಿ ಶೇ.40ರಷ್ಟು ಷೇರು ಖರೀದಿ ಸೇರಿದಂತೆ ಸಲಾರ್ಪುರಿಯಾ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಪಾಲು ಹೊಂದಿದ್ದಾರೆ. ಉಳಿದಂತೆ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮನೆ ನಿರ್ಮಾಣಕ್ಕೆ ಫೆಡರಲ್ ಬ್ಯಾಂಕ್‍ನಿಂದ 7.61 ಕೋಟಿ ರೂ. ಹಾಗೂ ಆರ್.ಟಿ.ನಗರ ಫೆಡರಲ್ ಬ್ಯಾಂಕ್‍ನಲ್ಲಿ 4 ಕೋಟಿ 25 ಲಕ್ಷ ಮನೆ ಸಾಲ. ಶೋಭಾ ಡೆವಲಪರ್ಸ್‍ನಿಂದ 8.48 ಕೋಟಿ ರೂ.ಗಳನ್ನು ಉಷಾ ಅವರು ಸಾಲ ಪಡೆದಿದ್ದಾರೆ. ಈ ಹಣಕಾಸಿನ ವ್ಯವಹಾರ ಬಗ್ಗೆಯೂ ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಮಾಹಿತಿ ಪಡೆಯುವ ಸಾಧ್ಯತೆ ಇದೆ.

Share This Article
Facebook Whatsapp Whatsapp Telegram
Previous Article Vishweshwar hegde kageri ಕರ್ನಾಟಕಲ್ಲಿ ಇತಿಹಾಸ ಸೃಷ್ಟಿಸಿದ ಸ್ಪೀಕರ್ ಕಾಗೇರಿ
Next Article yatnal appu pattanashetty 6 ತಿಂಗಳಿಗೊಂದು ಮಾತು – ಯತ್ನಾಳ್ ವಿರುದ್ಧವೇ ಅಪ್ಪು ಪಟ್ಟಣಶೆಟ್ಟಿ ಆಕ್ರೋಶ

Latest Cinema News

Adheera
ಟಾಲಿವುಡ್ ನಲ್ಲಿ ʻಅಧಿರ’ ಯುಗ ಆರಂಭ – ಹನುಮಾನ್ ನಿರ್ದೇಶಕನ ಚಿತ್ರ
Cinema Latest South cinema
Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories

You Might Also Like

Raichur Tumgabhadra aarti
Districts

ತುಂಗಭದ್ರೆಗೆ ಅಂಬಾ ಆರತಿ – ಸಿಂಧನೂರಿನಲ್ಲಿ ಗ್ರಾಮೀಣ ದಸರಾ ವೈಭವ

5 minutes ago
Mahesh Shetty Thimarodi 1
Latest

ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರು ಕಾಡಿಗೆ ಕಳಿಸಿ: ತಿಮರೋಡಿ ಗಡಿಪಾರಿಗೆ ಆಕ್ಷೇಪ

24 minutes ago
Haveri Lorry Accident
Districts

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ – ಎರಡು ತುಂಡಾದ ಲಾರಿ

40 minutes ago
Chaitanyananda Saraswati Swamiji
Latest

ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

52 minutes ago
Shivamogga Suicide
Crime

ಪ್ರೀತಿಗೆ ಮನೆಯವರ ವಿರೋಧ – ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನ; ಯುವತಿ ಸಾವು, ಯುವಕ ಪಾರು

60 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?