Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Bengaluru City

ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Public TV
Last updated: November 12, 2019 12:46 pm
Public TV
Share
3 Min Read
kj george
SHARE

ಬೆಂಗಳೂರು: ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜಾರ್ಜ್ ಅವರು 1985 ರಿಂದ 2019ರವರೆಗೆ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಧಾನಸಭೆಗೆ ಆಯ್ಕೆಯಾದ ವರ್ಷದಿಂದ ಇಲ್ಲಿಯವರೆಗೆ ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿಯ ವಿವರವನ್ನು ಆಧಾರವಾಗಿಟ್ಟುಕೊಂಡು ತನಿಖೆ ಆರಂಭಿಸಲಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ಇಡಿ ಈಗಾಗಲೇ ಪಡೆದುಕೊಂಡಿದೆ.

kjgeorge

ಜಾರ್ಜ್ ಅಥವಾ ಅವರ ಕುಟುಂಬ ಸದಸ್ಯರು, ಜಾರ್ಜ್ ಗೆ ಸಂಬಂಧಿಸಿದ ವ್ಯವಹಾರಗಳ ಜೊತೆ ಪಾಲುದಾರಿಕೆ ಹೊಂದಿರುವವರ ವಿಚಾರಣಾ ವರದಿಗಳಿದ್ದರೆ ಅವುಗಳನ್ನೂ ನೀಡುವಂತೆ ಇಡಿ ಲೋಕಾಯುಕ್ತಕ್ಕೆ ಪತ್ರ ಬರೆದಿದೆ.

ಅಮೆರಿಕದ ನ್ಯೂಯಾರ್ಕಿನಲ್ಲಿ ಜಾರ್ಜ್ ಭಾರಿಪ್ರಮಾಣದ ಆಸ್ತಿ ಹೊಂದಿದ್ದಾರೆ. ಜಾರ್ಜ್ ಅವರ ಮಗಳು ರೇನಿತಾ ಅಬ್ರಹಾಂ ಮತ್ತು ಅಳಿಯ ಕೆವಿನ್ ಅಬ್ರಹಾಂ ನ್ಯೂಯಾರ್ಕಿನಲ್ಲಿದ್ದು, ಈ ಆಸ್ತಿಗಳ ಮೌಲ್ಯ ಹತ್ತಾರು ಕೋಟಿಯಾಗಿದ್ದು ಇದು ಜಾರ್ಜ್ ಅವರಿಗೆ ಸೇರಿದೆ. ನ್ಯೂಯಾರ್ಕ್‍ನ ಮ್ಯಾನ್ ಹಟನ್‍ನ ಲಫಯೇಟ್ ಸ್ಟ್ರೀಟ್‍ನಲ್ಲಿರುವ ಕೆಲವು ಆಸ್ತಿಗಳೂ ಸೇರಿದಂತೆ ಅನೇಕ ಆಸ್ತಿಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಆರೋಪ ಏನು?
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ದೀಪಕ್ ಅವರು ಅಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

george ravikrishna reddy

ಈ ಕುರಿತು ಪ್ರತಿಕ್ರಿಯಿಸಿರುವ ರವಿ ಕೃಷ್ಣಾರೆಡ್ಡಿ, ಪ್ರಮುಖ ರಾಜಕೀಯ ನಾಯಕರು ತಮ್ಮ ಶಕ್ತಿ ಬಳಸಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಈಗ ಇಡಿ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಮೇಲೆ ಸಹ ಈ ಬಗ್ಗೆ ನಾವು ಇಡಿಗೆ ದೂರು ನೀಡಿದ್ದೆವು. ಎರಡು ವರ್ಷದ ಹಿಂದೆಯೇ ದೂರು ನೀಡಿದ್ದೆವು ಆದರೆ, ನಿಧಾನವಾಗಿ ತನಿಖೆ ನಡೆಸಿ ಇಡಿ ಕ್ರಮ ಕೈಗೊಂಡಿದೆ. ಇಂದೂ ಸಹ ಅನೇಕ ಮಂತ್ರಿಗಳ ಮಕ್ಕಳ ಹೆಸರಲ್ಲಿ ನೂರಾರು ಕೋಟಿ ರೂ. ಆಸ್ತಿ ಇದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಮಕ್ಕಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು.

ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದ ಜಾರ್ಜ್ ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ.ಜಾರ್ಜ್ ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ  ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ತಿಳಿಸಿದ್ದರು.

KJ George

ಜನ ಪ್ರತಿನಿಧಿಗಳು ಸಿಂಗಾಪುರ ಮಾರ್ಗವಾಗಿ ತಮ್ಮ ಎಲ್ಲ ವ್ಯವಹಾರಗಳನ್ನು ನಡೆಸುತ್ತಾರೆ. ಅಮೇರಿಕ, ಮಲೇಷ್ಯಾ, ಸಿಂಗಾಪುರ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ. ಹೀಗಾಗಿ ನೀವು ರಾಜಕಾರಣ ಮಾಡಿ ಇಲ್ಲವೇ ಕೈಗಾರಿಕೋದ್ಯಮಿ, ವ್ಯಾಪಾರಸ್ಥರಾಗುವುದು ಒಳ್ಳೆಯದು. ಆದರೆ ಎರಡೂ ಮಾಡುವುದು ಜನದ್ರೋಹದ ಕೆಲಸವಾಗಿದ್ದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಜನರ ದುಡ್ಡನ್ನು ವೈಯಕ್ತಿಕ ವಿಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ದೂರಿದ್ದರು.

TAGGED:americacorruptionEDenforcement directorateKJ GeorgelokayuktaRavi Krishna Reddyಅಮೆರಿಕಇಂಡಿಕೆಜೆ ಜಾರ್ಜ್ಜಾರಿ ನಿರ್ದೇಶನಾಲಯಭ್ರಷ್ಟಾಚಾರರವಿ ಕೃಷ್ಣಾರೆಡ್ಡಿಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
27 minutes ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
51 minutes ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
1 hour ago
NAGENDRA
Bengaluru City

ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ CBI ನೋಟಿಸ್

Public TV
By Public TV
2 hours ago
bengaluru roadside parking
Bengaluru City

ಬೆಂಗಳೂರು ವಾಹನ ಸವಾರರಿಗೆ ಶಾಕ್ – ಇನ್ಮುಂದೆ ರಸ್ತೆಬದಿ ಗಾಡಿ ನಿಲ್ಲಿಸೋಕೆ ಕಟ್ಬೇಕು ದುಡ್ಡು!

Public TV
By Public TV
2 hours ago
Punjab Man Shoots Wife 2 Daughters Then Kills Self. House Help Finds Bodies
Crime

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?