Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Bengaluru City

ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Public TV
Last updated: November 12, 2019 12:46 pm
Public TV
Share
3 Min Read
kj george
SHARE

ಬೆಂಗಳೂರು: ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜಾರ್ಜ್ ಅವರು 1985 ರಿಂದ 2019ರವರೆಗೆ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಧಾನಸಭೆಗೆ ಆಯ್ಕೆಯಾದ ವರ್ಷದಿಂದ ಇಲ್ಲಿಯವರೆಗೆ ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿಯ ವಿವರವನ್ನು ಆಧಾರವಾಗಿಟ್ಟುಕೊಂಡು ತನಿಖೆ ಆರಂಭಿಸಲಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ಇಡಿ ಈಗಾಗಲೇ ಪಡೆದುಕೊಂಡಿದೆ.

kjgeorge

ಜಾರ್ಜ್ ಅಥವಾ ಅವರ ಕುಟುಂಬ ಸದಸ್ಯರು, ಜಾರ್ಜ್ ಗೆ ಸಂಬಂಧಿಸಿದ ವ್ಯವಹಾರಗಳ ಜೊತೆ ಪಾಲುದಾರಿಕೆ ಹೊಂದಿರುವವರ ವಿಚಾರಣಾ ವರದಿಗಳಿದ್ದರೆ ಅವುಗಳನ್ನೂ ನೀಡುವಂತೆ ಇಡಿ ಲೋಕಾಯುಕ್ತಕ್ಕೆ ಪತ್ರ ಬರೆದಿದೆ.

ಅಮೆರಿಕದ ನ್ಯೂಯಾರ್ಕಿನಲ್ಲಿ ಜಾರ್ಜ್ ಭಾರಿಪ್ರಮಾಣದ ಆಸ್ತಿ ಹೊಂದಿದ್ದಾರೆ. ಜಾರ್ಜ್ ಅವರ ಮಗಳು ರೇನಿತಾ ಅಬ್ರಹಾಂ ಮತ್ತು ಅಳಿಯ ಕೆವಿನ್ ಅಬ್ರಹಾಂ ನ್ಯೂಯಾರ್ಕಿನಲ್ಲಿದ್ದು, ಈ ಆಸ್ತಿಗಳ ಮೌಲ್ಯ ಹತ್ತಾರು ಕೋಟಿಯಾಗಿದ್ದು ಇದು ಜಾರ್ಜ್ ಅವರಿಗೆ ಸೇರಿದೆ. ನ್ಯೂಯಾರ್ಕ್‍ನ ಮ್ಯಾನ್ ಹಟನ್‍ನ ಲಫಯೇಟ್ ಸ್ಟ್ರೀಟ್‍ನಲ್ಲಿರುವ ಕೆಲವು ಆಸ್ತಿಗಳೂ ಸೇರಿದಂತೆ ಅನೇಕ ಆಸ್ತಿಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಆರೋಪ ಏನು?
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ದೀಪಕ್ ಅವರು ಅಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

george ravikrishna reddy

ಈ ಕುರಿತು ಪ್ರತಿಕ್ರಿಯಿಸಿರುವ ರವಿ ಕೃಷ್ಣಾರೆಡ್ಡಿ, ಪ್ರಮುಖ ರಾಜಕೀಯ ನಾಯಕರು ತಮ್ಮ ಶಕ್ತಿ ಬಳಸಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಈಗ ಇಡಿ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಮೇಲೆ ಸಹ ಈ ಬಗ್ಗೆ ನಾವು ಇಡಿಗೆ ದೂರು ನೀಡಿದ್ದೆವು. ಎರಡು ವರ್ಷದ ಹಿಂದೆಯೇ ದೂರು ನೀಡಿದ್ದೆವು ಆದರೆ, ನಿಧಾನವಾಗಿ ತನಿಖೆ ನಡೆಸಿ ಇಡಿ ಕ್ರಮ ಕೈಗೊಂಡಿದೆ. ಇಂದೂ ಸಹ ಅನೇಕ ಮಂತ್ರಿಗಳ ಮಕ್ಕಳ ಹೆಸರಲ್ಲಿ ನೂರಾರು ಕೋಟಿ ರೂ. ಆಸ್ತಿ ಇದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಮಕ್ಕಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು.

ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದ ಜಾರ್ಜ್ ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ.ಜಾರ್ಜ್ ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ  ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ತಿಳಿಸಿದ್ದರು.

KJ George

ಜನ ಪ್ರತಿನಿಧಿಗಳು ಸಿಂಗಾಪುರ ಮಾರ್ಗವಾಗಿ ತಮ್ಮ ಎಲ್ಲ ವ್ಯವಹಾರಗಳನ್ನು ನಡೆಸುತ್ತಾರೆ. ಅಮೇರಿಕ, ಮಲೇಷ್ಯಾ, ಸಿಂಗಾಪುರ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ. ಹೀಗಾಗಿ ನೀವು ರಾಜಕಾರಣ ಮಾಡಿ ಇಲ್ಲವೇ ಕೈಗಾರಿಕೋದ್ಯಮಿ, ವ್ಯಾಪಾರಸ್ಥರಾಗುವುದು ಒಳ್ಳೆಯದು. ಆದರೆ ಎರಡೂ ಮಾಡುವುದು ಜನದ್ರೋಹದ ಕೆಲಸವಾಗಿದ್ದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಜನರ ದುಡ್ಡನ್ನು ವೈಯಕ್ತಿಕ ವಿಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ದೂರಿದ್ದರು.

TAGGED:americacorruptionEDenforcement directorateKJ GeorgelokayuktaRavi Krishna Reddyಅಮೆರಿಕಇಂಡಿಕೆಜೆ ಜಾರ್ಜ್ಜಾರಿ ನಿರ್ದೇಶನಾಲಯಭ್ರಷ್ಟಾಚಾರರವಿ ಕೃಷ್ಣಾರೆಡ್ಡಿಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
16 minutes ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
37 minutes ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
53 minutes ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
54 minutes ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
2 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?