ಬಳ್ಳಾರಿ: ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ ಹಾಕಲಾಗುವುದು ಎಂದು ಬಳ್ಳಾರಿ ಜಿಲ್ಲೆಯ ಕುರುಗೋಡು ಕೋಳೂರು ಗ್ರಾಮದಲ್ಲಿ ಡಂಗೂರು ಹೊರಡಿಸಲಾಗಿದೆ.
ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ರಿಂದ 10ತರಗತಿ ಒಟ್ಟು 184 ವಿದ್ಯಾರ್ಥಿಗಳು ಇದ್ದಾರೆ. ಆದರೆ ಶಾಲೆ ಪ್ರಾರಂಭವಾರದೂ ವಿದ್ಯಾರ್ಥಿಗಳ ಹಾಜರಾತಿ 50 ದಾಟಿಲ್ಲ. ಇದು ಶಿಕ್ಷಕರಿಗೆ ತೆಲೆನೋವು ಸೃಷ್ಟಿಸಿದೆ. ಮಕ್ಕಳನ್ನು ಶಾಲೆಗೆ ಬರುವ ನಿಟ್ಟಿನಲ್ಲಿ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು ಸೇರಿ ಸಭೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ
ಸಭೆಯಲ್ಲಿ ಚರ್ಚಿಸುವ ಸಂದರ್ಭದಲ್ಲಿ ಮಕ್ಕಳನ್ನು ಪಾಲಕರು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಕೂಲಿ ಕೆಲಸಕ್ಕೆ ಪಾಲಕರನ್ನು ಕರೆದುಕೊಂಡು ಹೋದರೆ ದಂಡ ಹಾಕುವ ಕುರಿತು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರತಿ ಓಣಿಯಲ್ಲಿ ದಂಡ ಹಾಕುವ ಕುರಿತು ಡಂಗೂರ ಸಾರಲಾಗಿದೆ. ಈ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಸಾಕಷ್ಟು ಸದ್ದು ಮಾಡುತ್ತಿದೆ.