ರಾಯಚೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದಂಪತಿ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.
ರಾಯಚೂರು ಜಿಲ್ಲಾ ಪ್ರವಾಸ ಹಿನ್ನೆಲೆ ಆಗಮಿಸಿರುವ ಬಿ.ಸಿ.ನಾಗೇಶ್ ಅವರು ಮಂತ್ರಾಲಯದಲ್ಲಿ ಮಂಚಾಲಮ್ಮ ದೇವಿ ದರ್ಶನ ಪಡೆದ ಬಳಿಕ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ತೆರಳಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ರಾಯಚೂರಿನಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್ ನಿರ್ಮಾಣದಿಂದ ಪೆಟ್ರೋಲ್ ಬೆಲೆ ಏರಿಕೆ: ಓವೈಸಿ ವ್ಯಂಗ್ಯ
ದೇವದುರ್ಗ ಅರಕೇರಾದಲ್ಲಿ ಆಯೋಜಿಸಿರುವ ಮಳೆ ನೀರು ಕೋಯ್ಲು ಯೋಜನೆ ಉದ್ಘಾಟನೆ ಬಳಿಕ ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಇದನ್ನೂ ಓದಿ: ರಕ್ಷಿತ್ ಶೆಟ್ಟಿಗೆ ‘ಚಾರ್ಲಿ’ ಕೊಟ್ಟಿದ್ದು ಬರೋಬ್ಬರಿ 100 ಕೋಟಿ ರೂ ಲಾಭವಂತೆ!