Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

Bengaluru City

ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

Public TV
Last updated: August 20, 2021 7:42 pm
Public TV
Share
2 Min Read
education
SHARE

ಬೆಂಗಳೂರು: ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ 2017-18ನೇ ಸಾಲಿನಿಂದ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯಗೊಳಿಸಲಾಗಿದೆ. ಆದರೆ ಕೆಲ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ಗಮನ ಹರಿಸಿ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದರು.

nagarbarana

2017-18ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿ 2020-21ನೇ ಶೈಕ್ಷಣಿಕ ವರ್ಷಕ್ಕೆ 4ನೇ ತರಗತಿ ಮಕ್ಕಳಿಗೆ ಈ ನಿಯಮದಡಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಿರಬೇಕಿತ್ತು. ಆದರೆ ರಾಜ್ಯದಲ್ಲಿರುವ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈ ನಿಯಮವನ್ನು ಉಲ್ಲಂಘಿಸುತ್ತಿರುವ ಬಗ್ಗೆ ಪ್ರಾಧಿಕಾರಕ್ಕೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿವೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದಿಂದ ಪ್ರಾಧಿಕಾರಕ್ಕೆ ಬಂದಿರುವ ಅಧಿಕೃತ ಮಾಹಿತಿ ಅನ್ವಯ 2021-22ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಸುಮಾರು 823 ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಕನ್ನಡ ಪಠ್ಯಪುಸ್ತಕಗಳನ್ನು ಖರೀದಿಸಲು ಅಧಿಕೃತ ಪಟ್ಟಿ ಸಲ್ಲಿಸಿರುವುದಿಲ್ಲ. ಹೀಗಾಗಿ ಈ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015 ಅನ್ನು ಸರಿಯಾಗಿ ಪಾಲಿಸುತ್ತಿರುವುದು ಅನುಮಾನ ಬರುವಂತಿದೆ. ಹೀಗಾಗಿ ಶಿಕ್ಷಣ ಇಲಾಖೆಯಲ್ಲಿನ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

KANNADA medium

1,2,3 ಮತ್ತು 4ನೇ ತರಗತಿಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲಾಗಿದೆಯೇ ಪರಿಶೀಲಿಸುವುದು. ತರಗತಿಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಸಕ್ಷಮ ಪ್ರಾಧಿಕಾರದಿಂದ ಖರೀದಿಸಲಾಗಿದೆಯೇ? ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದು. ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಹಾಗೂ ಶಿಕ್ಷಕರಿಗೆ ನಿಯಮಾನುಸಾರ ತರಗತಿಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸುವುದು. ವಿದ್ಯಾರ್ಥಿಗಳಿಗೆ 100 ಅಂಕದ ಕನ್ನಡ ಪರೀಕ್ಷೆಯನ್ನು ನಡೆಸಿರುವ ಬಗ್ಗೆ, ಅದರಂತೆ ಮೌಲ್ಯಮಾಪನ ಮಾಡಿರುವ ಬಗ್ಗೆ ಹಾಗೂ ಮೌಲ್ಯಮಾಪನದಂತೆ ಅಂಕಪಟ್ಟಿಯನ್ನು ವಿತರಿಸಿರುವ ಬಗ್ಗೆ ಪರಿಶೀಲಿಸಿ ದಾಖಲೆಗಳನ್ನು ಸಂಗ್ರಹಿಸುವುದು.

education minister

ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರಂತೆ ಉಳಿದೆಲ್ಲಾ ಅಗತ್ಯ ಪರಿಶೀಲನೆಗಳನ್ನು ನಡೆಸುವುದು. ಈ ಬಗ್ಗೆ 15 ದಿನಗಳೊಳಗಾಗಿ ಪ್ರಾಧಿಕಾರಕ್ಕೆ ವಿಸ್ತೃತ ವರದಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಈ ಸಂಬಂಧ ಶೀಘ್ರದಲ್ಲಿಯೇ ನೂತನ ಶಿಕ್ಷಣ ಸಚಿವರೊಂದಿಗೆ ಉನ್ನತ ಮಟ್ಟದ ಸಮಿತಿ ಸಭೆ ಕರೆಯಲಾಗುವುದು ಎಂದು ಉಪನಿರ್ದೇಶಕರುಗಳಿಗೆ ಪತ್ರ ಬರೆಯಲಾಗಿದೆ ಎಂದು ಸಚಿವರಿಗೆ ಇದೇ ವೇಳೆ ಪ್ರಾಧಿಕಾರದ ಅಧ್ಯಕ್ಷರು ಮಾಹಿತಿ ನೀಡಿದರು. ಇದನ್ನೂ ಓದಿ: ಮಕ್ಕಳಿಗೆ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ: ಟಿ.ಎಸ್ ನಾಗಾಭರಣ

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಹಾಜರಿದ್ದರು.

TAGGED:BC NageshDr santhosh hangaleducation ministerkannadalanguagePublic TVTS Nagabharanaಕನ್ನಡಟಿ.ಎಸ್ ನಾಗಾಭರಣಡಾ.ಸಂತೋಷ ಹಾನಗಲ್ಲಪಬ್ಲಿಕ್ ಟಿವಿಬಿ.ಸಿ.ನಾಗೇಶ್ಭಾಷಾ ಕಲಿಕಾಶಾಲೆಶಿಕ್ಷಣ ಸಚಿವ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

LPG Tankers
Latest

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ – ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌

Public TV
By Public TV
16 minutes ago
raichuru death
Latest

ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Public TV
By Public TV
57 minutes ago
Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
2 hours ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
2 hours ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?