ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ಗೆ (Eid Milad) ಹಾಕಿದ್ದ ಬ್ಯಾನರ್, ಹಸಿರು ಬಣ್ಣದ ಬಟ್ಟೆ ತೆರವುಗೊಳಿಸಲಾಗಿದೆ.
ಸಾಕಷ್ಟು ವಿವಾದದ ನಂತರ ತೆರವು ಕಾರ್ಯಾಚರಣೆ ನಡೆದಿದೆ. ರಾಗಿಗುಡ್ಡದ ಮುಖ್ಯರಸ್ತೆಯ ಹಮೀರ್ ಅಹಮದ್ ಸರ್ಕಲ್ನಲ್ಲಿ ಬ್ಯಾನರ್ ಗಳನ್ನು ಹಾಕಲಾಗಿತ್ತು. ಇದೀಗ ನಗರಪಾಲಿಕೆ ಸಿಬ್ಬಂದಿ ಈ ಕಮಾನನ್ನ ತೆರವುಗೊಳಿಸಿದ್ದಾರೆ. ಈ ಮೂಲಕ ನಗರದಲ್ಲಿದ್ದ ಎಲ್ಲಾ ಕಟೌಟ್ಗಳನ್ನು ಪಾಲಿಕೆ ತೆರವುಗೊಳಿಸಿದೆ. ಪವಿತ್ರ ಹೋಟೆಲ್ ಬಳಿ ಇದ್ದ ಖಡ್ಗ ಕೂಡ ತೆರವುಗೊಳಿಸಲಾಗಿದೆ.
ಮಾಜಿ ಸಚಿವ ಈಶ್ವರಪ್ಪ ಅವರು ಕಟೌಟ್ ತೆರವುಗೊಳಿಸುವಂತೆ ಆಗ್ರಹಿಸಿದ್ದರು. ತೆರವು ಮಾಡದಿದ್ರೆ ಎಲ್ಲಾ ಕಡೆ ತ್ರಿಶೂಲ ಹಾಕ್ತೀವಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ
ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Web Stories