ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಎಂಟು ಮೇವಿನ ಬಣವೆಗಳು

Public TV
0 Min Read
hvr fire 1

ಹಾವೇರಿ – ಆಕಸ್ಮಿಕ ಬೆಂಕಿಗೆ ಎಂಟು ಮೇವಿನ ಬಣವೆಗಳು ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಚಿಕ್ಕಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತರಾದ ಶೇಖಪ್ಪ, ಬಸಪ್ಪ, ಹೊನ್ನಪ್ಪ ಮತ್ತು ಹೊನ್ನಪ್ಪ ಕುರಗುಂದ ಎಂಬವರಿಗೆ ಸೇರಿದ ಮೇವಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಪ್ರಸಕ್ತ ವರ್ಷ ಭೀಕರ ಬರಗಾಲವಿದ್ದ ಕಾರಣ ರೈತರು ಜಾನುವಾರುಗಳಿಗಾಗಿ ಮೇವನ್ನು ಸಂಗ್ರಹಿಸಿಟ್ಟಿದ್ದರು. ಎಂಟು ಬೇವಿನ ಬಣವೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

hvr fire 2

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಜಿಲ್ಲಾಡಳಿತ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಮನವಿ ಮಾಡಿಕೊಂಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

hvr fire 3

Share This Article
Leave a Comment

Leave a Reply

Your email address will not be published. Required fields are marked *