ವಿಜಯಪುರ: ತಡರಾತ್ರಿ ಗುಡಿಸಲಿಗೆ ಬೆಂಕಿ (Fire) ಹತ್ತಿ ವೃದ್ಧ ದಂಪತಿ ಸಜೀವ ದಹನವಾದ ಘಟನೆ ವಿಜಯಪುರ (Vijayapura) ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ನಿವರಗಿ ರಸ್ತೆಯ ತೋಟದ ಮನೆಯಲ್ಲಿ ದುರ್ಘಟನೆ ನಡೆದಿದೆ. ಕರೀಂಸಾಬ್ ಟಪಾಲ್ (82), ಸಾಜನಬಿ ಟಪಾಲ್ (72) ಸಜೀವ ದಹನವಾಗಿದ್ದಾರೆ. ತಡರಾತ್ರಿ ಗುಡಿಸಲಿಗೆ ಆಕಸ್ಮಿಕ ಬೆಂಕಿ ಹತ್ತಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ಹೆಚ್ಚುವರಿ ಸಮಯ ನಿರಾಕರಿಸಿದ್ದಕ್ಕೆ ಶಾಲಾ ಕಟ್ಟಡವನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು
ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿ ದಂಪತಿ ಬಲಿಯಾಗಿದ್ದಾರೆ. ಘಟನೆಯು ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: 14ರ ಬಾಲಕಿಯನ್ನು ರೇಪ್ ಮಾಡಿ ಗರ್ಭಿಣಿಯಾಗಿಸಿದ ಮಲತಂದೆ