ಯಾದಗಿರಿ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಹೃದಯಾಘಾತದಿಂದ (Heart Attack) ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ (Yadgiri) ಜಿಲ್ಲೆಯ ಹುಣಸಗಿ (Hunasagi) ತಾಲೂಕಿನ ಕಲ್ಲದೇವನಹಳ್ಳಿಯಲ್ಲಿ ನಡೆದಿದೆ.
ನಂದಮ್ಮ ಹೊರಟ್ಟಿ (60) ಮೃತಪಟ್ಟ ವೃದ್ಧೆ. ಹುಣಸಗಿ ತಾಲೂಕಿನ ವಜ್ಜಲ ಗ್ರಾಮದವರಾದ ನಂದಮ್ಮ ಆರೋಗ್ಯ ಸಮಸ್ಯೆ ಹಿನ್ನೆಲೆ ಕಲಬುರಗಿ (Kalaburagi) ನಗರದ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆ ಹೋಗಿ ವಾಪಸ್ ಬಂದಿದ್ದ ನಂದಮ್ಮ ಸುರಪುರದಿಂದ (Surapura) ಸ್ವಂತ ಗ್ರಾಮ ವಜ್ಜಲಕ್ಕೆ ಬಸ್ನಲ್ಲಿ ಹೊರಟಿದ್ದರು. ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು- ಕಾರಣ ಅದಲ್ಲ ಅಂತ ವೈದ್ಯರ ವಾದ
ವಾಪಸ್ ಮನೆಗೆ ಬರುತ್ತಿದ್ದ ಸಂದರ್ಭ ನಂದಮ್ಮ ಅವರಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಸಮೀಪದ ಕಲ್ಲದೇವನಹಳ್ಳಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲೆಂದು ಕರೆದೊಯ್ಯುತ್ತಿದ್ದ ವೇಳೆ ಬಸ್ನಲ್ಲಿ ನಂದಮ್ಮ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪಿಎಸ್ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕ ಆತ್ಮಹತ್ಯೆ