ಶೃಂಗೇರಿಯ ಮೂರು ಗ್ರಾಮದ ಜನರಿಂದ ಮತದಾನ ಬಹಿಷ್ಕಾರ

Public TV
1 Min Read
udp copy

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ನೆಮ್ನಾರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಿಮ್ಮಿಗೆ, ಗೂಳಿಮಕ್ಕಿ ಹಾಗೂ ಅಬ್ಬಿವರೆ ಗ್ರಾಮದ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದ ಸೇತುವೆಯನ್ನು ನಕ್ಸಲ್ ಪ್ಯಾಕೇಜಿನಲ್ಲಿ ಸರ್ಕಾರ ಮಾಡುತಿತ್ತು. ಆದ್ರೆ ಕಾಮಗಾರಿ ನಡೆಯುತ್ತಿರುವಾಗ ಅರಣ್ಯ ಇಲಾಖೆಯವರು ಬಂದು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದ ಗ್ರಾಮದ ಮಕ್ಕಳು ಶಾಲೆಗೆ ತೆರಳಲು ಮಳೆಗಾಲದಲ್ಲಿ ಪರದಾಡುವ ಸ್ಥಿತಿ ಎದುರಾಗಲಿದೆ.

VOTE

ಈ ಹಿನ್ನೆಲೆಯಲ್ಲಿ 3 ಗ್ರಾಮದ ಜನ ಈ ಬಾರಿಯ ಚುನಾವಣೆಗೆ ಬಹಿಷ್ಕಾರ ಹಾಕಿದ್ದಾರೆ. ನಮಗೆ ಸೇತುವೆ ನಿರ್ಮಾಣವಾಗುವವರೆಗೂ ಯಾವುದೇ ಕಾರಣಕ್ಕೂ ಮತಾದಾನ ಮಾಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ನಾವು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಹೀಗಾಗಿ ಯಾಕೆ ಮತದಾನ ಮಾಡಬೇಕು ಎಂದು ಗ್ರಾಮಸ್ಥರಾದ ವಿಜೇಂದ್ರ ಹಿಮ್ನಿಗೆ ಹಾಗೂ ಶಂಕ್ರಪ್ಪ ಗೌಡ ಹಿಮ್ನಿಗೆ ಆಕ್ರೋಶ ಹೊರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *